ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಣೆ
ಲೋಕದರ್ಶನ ವರದಿ
ಕೊಪ್ಪಳ 14: ಇಲ್ಲಿಗೆ ಸಮೀಪದ ಭಾಗ್ಯನಗರ ಪಟ್ಟಣದಲ್ಲಿರುವ ಶ್ರೀ ನಾಗರತ್ನ ಶಿಕ್ಷಣ ಸೇವಾ ಸಂಸ್ಥೆಯ ಕಾರ್ಯದಶರ್ಿ ಅನೀಲ್ಕುಮಾರ ಬೇಗಾರ ಅವರ ನಿವಾಸದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ನಂತರ ನಾವೆಲ್ಲಾ ಭಾರತೀಯರು ನಮ್ಮ ಧರ್ಮ ಭಾರತೀಯ ಧರ್ಮ ನಮ್ಮ ಧರ್ಮ ಗ್ರಂಥ ಭಾರತದ ಸಂವಿಧಾನ ಎಂಬ ಮನಂರವರ ಈ ಹೇಳಿಕೆಯನ್ನು ಹೇಳುವುದರ ಮೂಲಕ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ನಾಗರತ್ನ ಶಿಕ್ಷಣ ಸೇವಾ ಸಂಸ್ಥೆಯ ಕಾರ್ಯದಶರ್ಿ ಅನೀಲ್ಕುಮಾರ ಬೇಗಾರ, ಅವರ ಧರ್ಮಪತ್ನಿ ಬಸಮ್ಮ, ಮಕ್ಕಳಾದ ಕು.ಜೀವನ್ ಬೇಗಾರ್, ಕು.ನಾಗರತ್ನ ಸೇರಿದಂತೆ ಹಿರಿಯ ಪತ್ರಕರ್ತ ಎಂ.ಸಾದಿಕ್ ಅಲಿ, ಜಗದೀಶ ಹುಯಿಲಗೋಳ ಮತ್ತಿತರರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 