ಸಿಂದಗಿ: ಸಚಿವ ಶ್ರೀರಾಮ ಕಾರ್ಯಕರ್ತರಿಂದ ಸನ್ಮಾನ
ಲೋಕದರ್ಶನ ವರದಿ
ಸಿಂದಗಿ 31: ಕಲಬುರಗಿ ಜಿಲ್ಲೆಯ ಅರಳಗುಂಡಗಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮಲು ಅವರು ವಿಜಯಪುರ ದಿಂದ ಸಿಂದಗಿ ಮಾರ್ಗವಾಗಿ ಹೋರಟ ಸಂದರ್ಭದಲ್ಲಿ ಚಿಕ್ಕಸಿಂದಗಿ ಬಳಿ ಬೈಪಾಸ್ನಲ್ಲಿ ಅವರಿಗೆ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದರು.
ಕ್ಷೇತ್ರದಲ್ಲಿ ಸತತ ಎರಡು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿ ಕ್ಷೇತ್ರ ಅಭಿವೃದ್ಧಿ ಮಾಡಿದ ಮಾಜಿ ಶಾಸಕ ರಮೇಶ ಭೂಸನೂರ ಅವರಿಗೆ ಸರಕಾರದ ಒಳ್ಳೆಯ ನಿಗಮ ಅದ್ಯಕ್ಷಸ್ಥಾನ ನೀಡಲು ಕೇಂದ್ರ ಹಾಗೂ ರಾಜ್ಯ ವರಿಷ್ಠರಿಗೆ ಒತ್ತಾಯಿಸುವಂತೆ ಮನವಿ ಮಾಡಿಕೊಂಡರು. ಅದಕ್ಕೆ ಉತ್ತರ ನೀಡಿದ ಸಚಿವರು ವರಿಷ್ಠರಲ್ಲಿ ಸಮಾಲೋಚನೆ ನಡೆಸಿ ನಿರ್ಧಾರ ಕೈಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪಕ್ಷದ ಪ್ರಮುಖರಾದ ಎಂ.ಎಸ್.ಮಠ, ಚಂದ್ರಶೇಖರ ನಾಗೂರ, ಅಶೋಕ ಅಲ್ಲಾಪುರ, ಸಂತೋಷ ಪಾಟೀಲ ಡಂಬಳ, ಬಿ.ಎಚ್.ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಸಂದೀಪ ಚೌರ, ಶಿವಾನಂದ ಆಲಮೆಲ, ಸಂತೋಷ ಹರನಾಳ, ಚಂದ್ರಶೇಖರ ಅಮಲಿಹಾಳ ಸೇರಿದಂತೆ ಇತರರು ಇದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 