ಸಿಂದಗಿ: ಅನುಮಾನಾಸ್ಪದ ಮಹಿಳೆ ಸಾವು ಪಿಎಸ್ಆಯ್, ಎಎಸ್ಆಯ್ ಅಧಿಕಾರಿಗಳ ಅಮಾನತ್ತು
ಲೋಕದರ್ಶನ ವರದಿ
ಸಿಂದಗಿ 27: ತಾಲೂಕಿನ ಅಸಂತಾಪೂರ ಗ್ರಾಮದಲ್ಲಿ ಇತ್ತಿಚಿಗೆ ನಡೆದ ರೇಣುಕಾ ಮಾದರ (19) ಅವಳ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಭಂದಿಸಿದಂತೆ ಕಲಕೆರಿ ಪಿಎಸ್ಆಯ್ ಹಾಗೂ ಎಎಸ್ಆಯ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಹೇಳಿದರು.
ಪಟ್ಟಣದ ಸಿಪಿಆಯ್ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಅಸಂತಾಪೂರ ಗ್ರಾಮದ ರೇಣುಕಾ ಮಾದರ ಎಂಬಾತ ಬಾಲಕಿ ಹೊಸಪೆಟಿಗೆ ಹೋಗಿ ಬರುವದಾಗಿ ಹೇಳಿ ಹೋದವಳು ಮರಳಿ ಬಂದಿಲ್ಲ ಎಂದು ಬಾಲಕಿಯ ತಾಯಿ ಭೀಮಾಬಾಯಿ ಮಾದರ ಸ.14 ರಂದು ಕಲಕೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದಕ್ಕಿಂತ ಮೊದಲು ಈ ಕುರಿತು ದೂರು ಸಲ್ಲಿಸಲು ಬಾಲಕಿಯ ತಾಯಿ ಪೋಲಿಸ ಠಾಣೆಗೆ ದೂರು ಹಲವು ಬಾರಿ ನೀಡಲು ಬಂದಾಗ್ಯೂ ಪಿಎಸ್ಆಯ್ ವಿನೋದ ಪೂಜಾರಿ ಹಾಗೂ ಎಎಸ್ಆಯ್ ಎಸ್.ಬಿ.ಆಸಂಗಿ ಇವರು ಪ್ರಕರಣವನ್ನು ದಾಖಲಿಸದೆ ನಿರ್ಲಕ್ಷಿಸಿರುವ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.
ಸ.19 ರಂದು ಬಾಲಕಿಯ ತಾಯಿ ಭೀಮಾಬಾಯಿ ಮಾದರ ಪುನಃ ಠಾಣೆಗೆ ಬಂದು ನನ್ನ ಮಗಳಿಗೆ ಗ್ರಾಮದ ಮಡಿವಾಳಪ್ಪ ಬಸಪ್ಪ ಬಡಿಗೇರ ಸೇರಿದಂತೆ 6 ಜನರು ಕೂಡಿಜೀವ ಬೇದರಿಕೆ ಹಾಕಿ ಅಪಹರಣ ಮಾಡಿ ಕೊಲೆ ಮಾಡಿದ್ದಾರೆ ಎಂದು ಕಲಕೇರಿ ಪೋಲಿಸ ಠಾಣೆಯಲ್ಲಿ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿತನಾದ ಮಡಿವಾಳಪ್ಪ ಬಸಪ್ಪ ಬಡಿಗೇರ ಎಂಬಾತನನ್ನು ಬಂಧಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿದೆ.
ಡಿವೈಎಸ್ಪಿ ಪಿ.ಎಸ್.ನ್ಯಾಮಗೊಡ, ಸಿಪಿಆಯ್ ಸತೀಶ ಕಾಂಬಳೆ ಪತ್ರಿಕಾ ಗೋಷ್ಠಿಯಲ್ಲಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 