ಆರು ನಕ್ಸಲರ ಶರಣಾಗತಿ: ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Six Naxals Surrender: Cops Seize Arms
ಚಿಕ್ಕಮಗಳೂರು 11: ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ..
ನಕ್ಸಲರು ಇರಿಸಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳ ನಿರಂತರ ಹುಡುಕಾಟದ ನಂತರ ಪೊಲೀಸರಿಗೆ ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಅಂತೆಯೇ ಒಂದು ಎ.ಕೆ-56,
ಮೂರು 303 ರೈಫಲ್, ಹನ್ನೆರಡು ಬೋರ್ ಎಸ್ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು – 8
ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ – 01 ದೊರೆತಿದೆ.
ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಬುಧವಾರ ಮುಖ್ಯವಾಹಿನಿಗೆ ಬಂದ ನಕ್ಸಲರು, ಅದೇ ಮೇಗೂರು ಅರಣ್ಯದಿಂದ ಹೊರ ಬಂದಿದ್ದರು. ನಕ್ಸಲರು ಶರಣಾಗುವ ಮೊದಲು ಕೊನೆಯ ಸಭೆ ನಡೆಸಿದ್ದ ಮೇಗೂರು ಅರಣ್ಯ ಪ್ರದೇಶದಲ್ಲಿ ಪೊಲೀಸ್ ತಂಡ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಕೊಪ್ಪ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 