ತಿರುಪತಿ ದೇಗುಲದಲ್ಲಿ ಕಾಲ್ತುಳಿತ ಆರು ಮಂದಿ ಸಾವು: ಮೃತರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ
Six killed in Tirupati temple stampede: Rs 25 lakh compensation announced for each of the deceased
ತಿರುಪತಿ 09: ತಿರುಪತಿಯ ಪ್ರಸಿದ್ಧ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಬುಧವಾರ ರಾತ್ರಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಆರು ಮಂದಿ ಭಕ್ತರು ಮೃತಪಟ್ಟಿದ್ದಾರೆ.
ಮೃತರಲ್ಲಿ ಮೂವರು ಮಹಿಳೆಯರು. ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೂರಾರು ಭಕ್ತರು ಸೇರಿದ್ದು, ಟೋಕನ್ ಪಡೆಯಲು ಒಟ್ಟಿಗೆ ಮುಗಿಬಿದ್ದುದು ಅವಘಡಕ್ಕೆ ಕಾರಣವಾಗಿದೆ.
ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.
ಮೃತರ ಪೈಕಿ ಒಬ್ಬರ ಗುರುತು ಸಿಕ್ಕಿದೆ. ಗೇಟು ತೆರೆಯುತ್ತಿದ್ದಂತೆ ಎಲ್ಲರೂ ನುಗ್ಗಿದರು. ಹೀಗಾಗಿ ಕಾಲ್ತುಳಿತ ಉಂಟಾಯಿತು ಎಂದು ತಿರುಮಲ ತಿರುಪತಿ ದೇವಸ್ಥಾನ ಅಧ್ಯಕ್ಷ ಬಿ.ಆರ್.ನಾಯ್ಡು ತಿಳಿಸಿದ್ದಾರೆ.
ಪ್ರತಿ ವರ್ಷ ಇಲ್ಲಿನ ದೇವಸ್ಥಾನದಲ್ಲಿ ‘ವೈಕುಂಠ ದ್ವಾರ ದರ್ಶನ’ಕ್ಕಾಗಿ ದೇಶದ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.
‘ದೇವಸ್ಥಾನ ಆವರಣದ ವಿಷ್ಣು ನಿವಾಸ ಬಳಿ ಆದ ನೂಕುನುಗ್ಗಲಿನಲ್ಲಿ ಆರು ಮಂದಿ ಭಕ್ತರು ಮೃತಪಟ್ಟಿದ್ದು, ನನಗೆ ತೀವ್ರ ನೋವಾಗಿದೆ’ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೃತರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ
ಆಂಧ್ರ ಪ್ರದೇಶದ ತಿರುಪತಿಯಲ್ಲಿ ಜನವರಿ 8ರಂದು ಬುಧವಾರ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 