ಜೀವನ ನಿರ್ವಹಣೆಗೆ ಕೌಶಲ್ಯ ಉದ್ಯೋಗ ಅಗತ್ಯ
ಲೋಕದರ್ಶನವರದಿ
ರಾಣೇಬೆನ್ನೂರು16: ಜೀವನ ಸಾಗಿಸುವಲ್ಲಿ ಕೌಶಲ್ಯಗಳ ಪ್ರಾಮುಖ್ಯತೆ ಬಹಳ ಮುಖ್ಯ, ವಿದ್ಯಾಥರ್ಿ ಜೀವನದಲ್ಲಿಯೇ ಕೌಶಲ್ಯ ಪಡೆಯಬೇಕು, ಅಂದಾಗ ಮಾತ್ರ ಉತ್ತಮವಾದ ಜೀವನ ನಡೆಸಬಹುದು ಎಂದು ಪ್ರಾಧ್ಯಾಪಕ ಡಾ| ಅಶೋಕ ಕುಲರ್ಿ ಹೇಳಿದರು.ನಗರದ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾವಂತರಾದರೆ ಸಾಲದು ಕೌಶಲ್ಯ ನೈಪುಣ್ಯತೆ ಇಂದು ಬಹಳ ಅಗತ್ಯವಿದೆ ಎಂದರು.ಪ್ರಾಂಶುಪಾಲ ಎಲ್.ವಿ. ಸಂಗಳದ ಮಾತನಾಡಿ, ಕೌಶಲ್ಯಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನವನ್ನು ನಡೆಸಬಹುದೆಂದು ಉದಾಹರಣೆಗಳ ಮೂಲಕ ತಿಳಿಸಿದ ಅವರು, ವಿದ್ಯಾಥರ್ಿಗಳು ಈ ರೀತಿಯ ತರಬೇತಿಗಳನ್ನು ಹೆಚ್ಚು ಪಡೆಯಬೇಕು ಎಂದರು. ನೊಡಲ್ ಅಧಿಕಾರಿ ನಾರಯಣಕರ್ ಪಿ.ಎಂ. ಮಾತನಾಡಿ, ಇಂದಿನ ಯುಗದಲ್ಲಿ ಕೌಶಲ್ಯಗಳ ಪ್ರಾಮುಖ್ಯತೆ ಕುರಿತು ವಿವರಣೆ ಮೂಲಕ ತಿಳಿಸಿದರು. ಸಂಯೋಜಕ ಸುನಿಲ ಎಂ.ಹೆಚ್, ಶಶಿಧರ ಹಿರೇಮಠ, ಶಶಿಕಾಂತ ರಾಠೋಡ, ನಾಗಣ್ಣನವರ, ಗುಡಿಸಾಗರ, ಲಕ್ಷ್ಮಣ ಹಾಗೂ ಅನಿಲ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 