ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸ್ಮಾರ್ಟ್ ಬೋರ್ಡ್
Smart board to provide quality education to children in rural areas
ವಿಜಯಪುರ 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.
ಇಂದು ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ ಉದ್ಘಾಟನೆ ನೆರೆವೆರಿಸಿ ಅವರು ಮಾತನಾಡಿದರು. ಮಹಾನಗರಗಳ ಖಾಸಗಿ ಶಾಲೆಗಳಲ್ಲಿ ಸಿಗುವ ಅತ್ಯಾಧುನಿಕ ಸೌಲಭ್ಯಗಳನ್ನು ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒದಗಿಸಲು ಸಚಿವ ಎಂ. ಬಿ. ಪಾಟೀಲ ಅವರು ಸಿ.ಎಸ್.ಆರ್ ಅನುದಾನವನ್ನು ಬಳಸಿ ಸ್ಮಾರ್ಡ್ ಬೋರ್ಡ್ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಈ ಅನುದಾನವನ್ನು ಬಳಸಿ ಬಬಲೇಶ್ವರ ಮತಕ್ಷೇತ್ರದ ಸರಕಾರಿ ಶಾಲೆಗಳಲ್ಲಿ ಕಳೆದ ವರ್ಷ 25 ಮತ್ತು ಈ ವರ್ಷ 25 ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಮಕ್ಕಳು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತೀತರ ವಿಷಯಗಳನ್ನು ದೃಶ್ಯಮಾಧ್ಯಮ (ಆಡಿಯೋ-ವಿಶುವಲ್ಸ್) ಮೂಲಕ ಸರಳವಾಗಿ ಕಲಿಯಬಹುದಾಗಿದೆ. ಮಕ್ಕಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಕರು ಕೂಡಾ ಸ್ಮಾರ್ಟ್ ಕ್ಕಾಸ್ ಬಗ್ಗೆ ಸಂಪೂರ್ಣ ಬಗ್ಗೆ ಮಾಹಿತಿ ಪಡೆದು ಮಕ್ಕಳಿಗೆ ಗುಣಮಟ್ಟದ ಭೋದನೆ ಮಾಡಬೇಕು. ಅಲ್ಲದೇ, ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಬೇಕು.
ಅದರ ಜೊತೆಗೆ ಮೊಬೈಲ್ ಗಿಳಿನಿಂದ ಹೊರಬರಲು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅರ್ಜುನ ಹೀರು ರಾಠೋಡ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರು ಬಸವ ನಾಡಿನಲ್ಲಿ ಈಗಾಗಲೇ ಜಲಕ್ರಾಂತಿ ಮಾಡಿದ್ದಾರೆ. ಈಗ ಶಿಕ್ಷಣ ಕ್ರಾಂತಿ ಮಾಡುತ್ತಿದ್ದು, ನಮ್ಮ ಗ್ರಾಮೀಣ ಭಾಗದ ಬಡ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮೂಲಕ ನಗರ ಮತ್ತು ಗ್ರಾಮೀಣ ಭಾಗದ ಮಧ್ಯ ಇರುವ ಶಿಕ್ಷಣದ ಗುಣಮಟ್ಟದ ಅಂತರವನ್ನು ನಿವಾರಿಸಿದ್ದಾರೆ. ನಮ್ಮ ಗ್ರಾಮೀಣ ಪ್ರತಿಭೆಗಳಿಗೆ ಇದು ವರದಾನವಾಗಿದ್ದು. ಮುಂಬರುವ ದಿನಗಳಲ್ಲಿ ನಮ್ಮ ವಿದ್ಯಾರ್ಥಿಗಳು ಮಹಾನಗರಗಳ ಕಾರ್ೋರೇಟ್ ಶಾಲೆಗಳ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಾಧನೆ ಮಾಡಲಿದ್ದಾರೆ ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಅಖಿಲಾ ಬಸನಗೌಡ ಪಾಟೀಲ, ಗ್ರಾ. ಪಂ. ಅಧ್ಯಕ್ಷ ರಂಗಾ ಬರಕಡೆ, ಎಸ್ಡಿಎಂಸಿ ಅಧ್ಯಕ್ಷ ಸಿದ್ದಣ್ಣ ಶಿರಾಳಶೆಟ್ಟಿ, ಗ್ರಾ. ಪಂ ಮಾಜಿ ಅಧ್ಯಕ್ಷ ಪೀರ ಪಟೇಲ ಪಾಟೀಲ, ಮುಖಂಡರಾದ ಶ್ರೀಶೈಲ ದಳವಾಯಿ, ಪ್ರಕಾಶ ರಾಠೋಡ, ತುಕಾರಾಮ ಮೋಹಿತೆ, ಅಶೋಕ ರಾಠೋಡ, ಮದುಗೌಡ ಪಾಟೀಲ, ಗೋವಿಂದ ರಾಠೋಡ, ಸುಂದರಪಾಲ ರಾಠೋಡ, ತುಕಾರಾಮ ರಾಠೋಡ, ಶೈಲಜಾ ರಾಠೋಡ, ವಿಜಯಪುರ ಗ್ರಾಮೀಣ ಬಿ.ಇ.ಓ ಪ್ರಮೋದಿನಿ ಬಳೋಲಮಟ್ಟಿ, ಶಾಲೆಯ ಶಿಕ್ಷಕರು, ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 