ಮಲಗಿದ್ದ ಮಕ್ಕಳಿಗೆ ಹಾವು ಕಡಿತ: ಬಾಲಕ ಸಾವು
Snake bites sleeping children: Boy dies
ಕಾರವಾರ 24: ಮನೆಯಲ್ಲಿ ಮಲಗಿದ್ದ ಮಕ್ಕಳಿಗೆ ಬೆಳಗಿನ ಜಾವ ಹಾವು ಕಚ್ಚಿದ ದುರ್ಘಟನೆ ತಾಲೂಕಿನ ಬನವಾಸಿ ಸನಿಹದ ಸಹಸ್ರಳ್ಳಿ ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಹಾವು ಕಚ್ಚಿದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ಆತನ ತಂಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ. ಬಾಲಕ ಮಿಥುನ್ ಆರನೇ ತರಗತಿಯಲ್ಲಿ ಓದುತ್ತಿದ್ದ. ಮಿಥುನ್ ಪುಟ್ಟಪ್ಪ ನಾಯ್ಕ (12) ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.
ಹಾವಿನ ಕಡಿತಕ್ಕೊಳಗಾದ ಆತನ ಸಹೋದರಿ ದೀಕ್ಷಾ ಪುಟ್ಟಪ್ಪ ನಾಯ್ಕ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಮಿಥುನ್ ಮತ್ತು ದೀಕ್ಷಾ ಮಂಗಳವಾರ ರಾತ್ರಿ ಊಟ ಮುಗಿಸಿ , ಮನೆಯಲ್ಲೇ ಮಲಗಿದ್ದರು. ಮುಂಜಾನೆ ವೇಳೆ ಇಬ್ಬರೂ ಏಕಾಏಕಿ ಎದ್ದು ವಾಂತಿ ಮಾಡತೊಡಗಿದ್ದಾರೆ . ಪಾಲಕರು, ಮಕ್ಕಳ ಸ್ಥಿತಿ ಕಂಡು ಆಸ್ಪತ್ರೆಗೆ ಕರೆದೊಯ್ದರು. ಇದೇ ವೇಳೆ ಮನೆಯೊಳಗಿಂದ ಹಾವೊಂದು ಹೊರಗೆ ಹೋಗಿದ್ದನ್ನು ಗಮನಿಸಿದ್ದಾರೆ.
ಬನವಾಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿದ, ನಂತರ ಹೆಚ್ಚಿನ ಚಿಕಿತ್ಸೆಗೆ ಶಿರಸಿಯ ಮಹಾಲಕ್ಷ್ಮೀ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಿಥುನ್ ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ದೀಕ್ಷಾ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾಳೆವೈದ್ಯರ ಪ್ರಾಥಮಿಕ ಪರೀಶೀಲನೆಯಲ್ಲಿ ಮಿಥುನ್ನ ಕಿವಿಗೆ ಹಾಗೂ ದೀಕ್ಷಾಳ ಕೈ ಬೆರಳಿಗೆ ವಿಷಪೂರಿತ ಹಾವು ಕಚ್ಚಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.ಘಟನೆ ಕುರಿತು ಮಾಹಿತಿ ಪಡೆದ ಬನವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ಮಾಡಿ, ಪ್ರಕರಣ ದಾಖಲಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 