ಸಾಮಾಜಿಕ ಪರಿಶೋಧನಾ ಶಾಲಾ ಸಭೆ
Social Exploration School Meeting
ತಾಳಿಕೋಟಿ08: ಜಿಲ್ಲಾ ಪಂಚಾಯತ,ವಿಜಯಪುರ ಮತ್ತು ತಾಲೂಕ ಪಂಚಾಯತ, ತಾಳಿಕೋಟಿ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು,ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ,ವಿಜಯಪುರ2025-2026ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮತ್ತು ಕ್ಷೀರ ಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನಾ ಶಾಲಾಸಭೆ ಬ್ರಹ್ಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಕಿರಣ ಎಚ್.ಪಾಟೀಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೈತ್ರಾ.ರಾಠೋಡ ನಿರ್ದೇಶಕರು ಸಾಮಾಜಿಕ ಪರಿಶೋಧನಾ ಇಲಾಖೆ ನಿರ್ದೇಶಕಿ ಮೈತ್ರಾ ರಾಥೋಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ ಪೌಷ್ಟಿಕಾಂಶ ಹಾಗೂ ಬಿಸಿ ಊಟದ ಮಹತ್ವ ವಿವರಿಸಿ, ಈ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಬಿಸಿ ಊಟ ಸೇವಿಸುತ್ತಿದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಜೆ.ಎಮ್.ಕೊಣ್ಣೂರ, ಹಾಗೂ ಎಸ್.ಎಸ್.ಪಾಟೀಲ ಇದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 