ಮಹಿಳಾ ಸಬಲೀಕರಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಮಹಾದೇವ ಸ್ವಾಮೀಜಿ
Societal development is possible through women's empowerment: Mahadeva Swamiji
ಕುಕನೂರಿನಲ್ಲಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಂಭ್ರಮ
ಕುಕನೂರು 1: ಪಟ್ಟಣದ ಅನ್ನದಾನೀಶ್ವರ ಶಾಖಾಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಪೂಜ್ಯ ಮಹಾದೇವ ಸ್ವಾಮೀಜಿ ಆಶೀರ್ವಚನ ನೀಡಿ, "ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾದಾಗ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಜ್ಞಾನ ವಿಕಾಸ ಯೋಜನೆ ಗ್ರಾಮೀಣ ಮಹಿಳೆಯರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ" ಎಂದು ಹೇಳಿದರು. ಸ್ವಾವಲಂಬನೆಗೆ ಜ್ಞಾನ ವಿಕಾಸ ಕೇಂದ್ರದ ಕೊಡುಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಅಧಿಕಾರಿ ಶ್ರೀಶೈಲ್ ಎಚ್. ಮಾತನಾಡಿ, ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಕೌಶಲ್ಯ ತರಬೇತಿ, ಸ್ವ-ಉದ್ಯೋಗ ಮಾರ್ಗದರ್ಶನ ಹಾಗೂ ಆರ್ಥಿಕ ಸಾಕ್ಷರತೆ ನೀಡಲಾಗುತ್ತಿದೆ. ಕುಕನೂರು ಕೇಂದ್ರವು ಕಳೆದ ಒಂದು ವರ್ಷದಲ್ಲಿ ನೂರಾರು ಮಹಿಳೆಯರ ಬದುಕಿಗೆ ಹೊಸ ದಿಕ್ಕು ನೀಡಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 