ಮಹಿಳಾ ಸಬಲೀಕರಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಮಹಾದೇವ ಸ್ವಾಮೀಜಿ
Societal development is possible through women's empowerment: Mahadeva Swamiji
ಕುಕನೂರಿನಲ್ಲಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಂಭ್ರಮ
ಕುಕನೂರು 1: ಪಟ್ಟಣದ ಅನ್ನದಾನೀಶ್ವರ ಶಾಖಾಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಪೂಜ್ಯ ಮಹಾದೇವ ಸ್ವಾಮೀಜಿ ಆಶೀರ್ವಚನ ನೀಡಿ, "ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾದಾಗ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಜ್ಞಾನ ವಿಕಾಸ ಯೋಜನೆ ಗ್ರಾಮೀಣ ಮಹಿಳೆಯರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ" ಎಂದು ಹೇಳಿದರು. ಸ್ವಾವಲಂಬನೆಗೆ ಜ್ಞಾನ ವಿಕಾಸ ಕೇಂದ್ರದ ಕೊಡುಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಅಧಿಕಾರಿ ಶ್ರೀಶೈಲ್ ಎಚ್. ಮಾತನಾಡಿ, ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಕೌಶಲ್ಯ ತರಬೇತಿ, ಸ್ವ-ಉದ್ಯೋಗ ಮಾರ್ಗದರ್ಶನ ಹಾಗೂ ಆರ್ಥಿಕ ಸಾಕ್ಷರತೆ ನೀಡಲಾಗುತ್ತಿದೆ. ಕುಕನೂರು ಕೇಂದ್ರವು ಕಳೆದ ಒಂದು ವರ್ಷದಲ್ಲಿ ನೂರಾರು ಮಹಿಳೆಯರ ಬದುಕಿಗೆ ಹೊಸ ದಿಕ್ಕು ನೀಡಿದೆ ಎಂದು ತಿಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 