ಕಂಕಣ ಸೂರ್ಯ ಗ್ರಹಣ: ನೆಹರೂ ತಾರಾಲಯಕ್ಕಿಲ್ಲ ಪ್ರವೇಶ
ಬೆಂಗಳೂರು, ಜೂ.21, ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗಿದೆ.ಗ್ರಹಣ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತೀರ ಕಷ್ಟವಾಗಲಿದೆ. ಆದ್ದರಿಂದ ನೆಹರು ತಾರಾಲಯದ ವೆಬ್ಸೈಟ್ನಲ್ಲಿ ಗ್ರಹಣದ ನೇರ ಪ್ರಸಾರವಾಗಲಿದ್ದು, ಈ ಮೂಲಕ ಸಾರ್ವಜನಿಕರು ಗ್ರಹಣ ವೀಕ್ಷಿಸಬಹುದು ಎಂದು ನೆಹರು ತಾರಾಲಯದ ನಿರ್ದೇಶಕ ಡಾ.ಪ್ರಮೋದ್ ಗಲಗಲಿ ತಿಳಿಸಿದ್ದಾರೆ.ಇನ್ನು, ಮನೆಯಲ್ಲಿದ್ದವರೂ ಬರಿಗಣ್ಣಿನಿಂದ ಸೂರ್ಯ ಗ್ರಹಣವನ್ನು ವೀಕ್ಷಿಸಬೇಡಿ. ಸೋಲಾರ್ ಕನ್ನಡಕವನ್ನು ಬಳಸಿ ಸೂರ್ಯಗ್ರಹಣವನ್ನು ವೀಕ್ಷಿಸಿ ಎಂದು ಅವರು ಸೂಚಿಸಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 