ಮುಕ್ತ ಮನಸ್ಸಿನಿಂದಸಮಸ್ಯೆಗಳನ್ನುತಿಳಿಸಿರಿ : ಕೋಳೂರ
Solve problems with an open mind: Kolur
ಶಿಗ್ಗಾವಿ 27 : ಪ್ರತಿಯೊಂದು ಮನೆಯ ಸದಸ್ಯರೊಂದಿಗೆ ಬೆರತು ನಿರ್ಭಯ ವಾತಾವರಣ ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದೇ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ ಉದ್ದೇಶ ಎಂದು ಎ.ಎಸ್.ಐ ಪಿ.ಆರ್.ಕೋಳೂರ ಹೇಳಿದರು.
ಪಟ್ಟಣದ 1 ನೇ ವಾರ್ಡಿನ ಮೈಲಾರಲಿಂಗೇಶ್ವರ ದೇವಸ್ಥಾನ ಹತ್ತಿರ ಮನೆಗಳಿಗೆ ಬೇಟಿ ನೀಡಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಸರಕಾರದ ಆದೇಶದಂತೆ ಮನೆ ಮನೆಗೆ ಹೋಗಿ ಪ್ರತಿಯೊಂದು ಮನೆಯ ಸದಸ್ಯರ ಮಾಹಿತಿಯನ್ನು ಕಲೆಹಾಕಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನ ಪಡುತ್ತೇವೆ ಆದ್ದರಿಂದ ಮುಕ್ತ ಮನಸ್ಸಿನಿಂದ ನಿಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಿರಿ ಎಂದರು.
ಹವಾಲ್ದಾರ ಎಮ್.ಎಸ್.ಸೂರಗೊಂಡ ಮಾತನಾಡಿ ಮಾಹಿತಿ ಕಲೆಹಾಕಿದ 40-50 ಮನೆಯ ಸದಸ್ಯರ ವಾಟ್ಸಫ್ ಗುಂಪು ಮಾಡಿ ಅದರ ಮುಖಾಂತರ ಮಾಹಿತಿಯನ್ನು ಕ್ರೋಡೀಕರಿಸಿ ತಕ್ಷಣವೇ ಸಮಸ್ಯೆಯನ್ನು ಪರಿಹರಿಸಲು ಕಾನೂನು ರಿತ್ಯ ಪ್ರಯತ್ನ ಮಾಡುವ ಉದ್ದೇಶವಾಗಿದೆ ಎಂದರು. ಈ ಸಂದರ್ಭದಲ್ಲಿ ಮನೆಯ ಮಾಲಕರಾದ ರಾಮಚಂದ್ರ ಶ್ರೀನಿವಾಸ ದೈವಜ್ಞ, ಬಾಡಿಗೆದಾರ ಗದಿಗೆಪ್ಪ ಹುಯಿಲಗೋಳ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 