ಸೋಮಶೇಖರ್ ರೆಡ್ಡಿ ಬಂಧನಕ್ಕೆ ಕನ್ನಡಪರ ಸಂಘಟನೆ ಆಗ್ರಹ
ಬೆಂಗಳೂರು, ಜ.16: ಸಮಾಜದಲ್ಲಿ ಶಾಂತಿ ಕದಡುತ್ತಿರುವ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕ್ರಾಂತಿ ಸೇನೆ ಸದಸ್ಯರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ, ಸೇನೆ ಕಾರ್ಯಕರ್ತರು, ಸೋಮಶೇಖರ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ಗೌರವ ತರುವಂತೆ ಮಾತನಾಡಬೇಕು. ಅವರ ಹೇಳಿಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವಂತಿದೆ ಎಂದು ದೂರಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ ಸೇನೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸೈಫುಲ್ಲಾ, ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಸಭೆಯೊಂದರಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಅವರ ಹೇಳಿಕೆ ಸೌಹಾರ್ದತೆ ಹಾಳುಮಾಡುವ ದುರುದ್ದೇಶ ಹೊಂಡಿದೆ. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದರೂ ಸಹ ರೆಡ್ಡಿ ಅವರನ್ನು ಆಡಳಿತಾರೂಧ ಬಿಜೆಪಿ ಸರ್ಕಾರ ಅವರನ್ನು ಬಂಧಿಸಿಲ್ಲ ಎಂದು ದೂರಿದರು.
ಸಮಾಜದಲ್ಲಿ ಶಾಂತಿ ಕದಡುವ, ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವ ಇಂತಹ ಹೇಳಿಕೆ ಖಂಡನೀಯ. ಸೋಮಶೇಖರ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 