ಬಳ್ಳಾರಿಯಲ್ಲಿ ಶೀಘ್ರದಲ್ಲೇ ಕ್ಷಿಪ್ರ ಕೊರೊನಾ ಸೋಂಕು ಪರೀಕ್ಷಾ ಯಂತ್ರ
ಬಳ್ಳಾರಿ, ಏ 9,ಕೊರೊನಾ ವೈರಾಣು ಸೋಂಕು ಪರೀಕ್ಷಿಸುವ ಕ್ಷಿಪ್ರ ಪರೀಕ್ಷಾ ಯಂತ್ರಗಳು ಏಪ್ರಿಲ್ 12 ರಂದು ಬಳ್ಳಾರಿ ಜಿಲ್ಲೆಗೆ ಬರಲಿದ್ದು ಅವುಗಳ ಬಳಕೆ ಬಗೆಗೆ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.ಈ ಯಂತ್ರಗಳನ್ನು ಜಿಲ್ಲಾ ವಿಪತ್ತು ಪರಿಹಾರ ನಿಧಿ ಮೂಲಕ ಈ ಯಂತ್ರಗಳನ್ನು ಖರೀದಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕ್ವಾರಂಟೈನ್ ನಲ್ಲಿರುವ 55 ವರ್ಷಕ್ಕಿಂತ ಮೇಲ್ಪಟ್ಟವರು ಯಾವುದೇ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅಂತಹವರ ಮಾಹಿತಿ ಪಡೆದು ವಿಶೇಷ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದಾರೆ.ದಾನಿಗಳ ನೆರವಿನಿಂದ ಪಡೆದ ಚಾದರ, ಸೋಪು, ಟೂತ್ ಪೇಸ್ಟ್ ಹೀಗೆ ಅಗತ್ಯವಸ್ತುಗಳುಳ್ಳ ಕಂಫರ್ಟ್ ಕಿಟ್ ಅನ್ನು ಕ್ವಾರಂಟೈನ್ ನಲ್ಲಿರುವವರಿಗೆ ಮತ್ತು ಐಸೊಲೇಷನ್ ವಾರ್ಡ್ ಗಳಲ್ಲಿರುವವರಿಗೆ ಒದಗಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಕೆ.ನಿತೀಶ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 