ಶೀಘ್ರದಲ್ಲೇ ಬೆಳ್ಳಿತೆರೆಗೆ ‘ಆನೆಬಲ‘
anebal
ಬೆಂಗಳೂರು, ಡಿ 23- ಜನತಾ ಟಾಕೀಸ್ ಅವರ ಚೊಚ್ಚಲ ನಿರ್ಮಾಣದ ‘ಆನೆಬಲ‘ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ
ಇದು ಹೊಸ ಪ್ರತಿಭೆಗಳ ಚಿತ್ರವಾಗಿದ್ದು, ಡಾ ವಿ ನಾಗೇಂದ್ರ ಪ್ರಸಾದ್ ರಚನೆಯ ‘ಮುದ್ದೆ ಮುದ್ದೆ‘ ಹಾಗೂ ‘ಮಳವಳ್ಳಿ ಜಾತ್ರೇಲಿ‘ ಹಾಡುಗಳು ಈಗಾಗಲೇ ಜನಪ್ರಿಯವಾಗಿವೆ ಅನೇಕ ಹೊಸ ಅಂಶಗಳನ್ನು ಹೊತ್ತು ಬರುತ್ತಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆಗಳಿವೆ
ಸೂನಗಹಳ್ಳಿ ರಾಜು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ‘ಲೂಸಿಯಾ‘ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು, ಯೋಗರಾಜ್ ಭಟ್ ಒಂದು ಹಾಡನ್ನು ಬರೆದಿದ್ದಾರೆ. ಜೆ.ಟಿ.ಬೆಟ್ಟೇಗೌಡ ಛಾಯಾಗ್ರಹಣ, ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ.
ನಿರ್ಮಾಪಕರಾದ ಎ.ವಿ.ವೇಣುಗೋಪಾಲ್ ಅಡಕಿಮಾರನಹಳ್ಳಿ ಅವರು ರೈತಾಪಿ ಕುಟುಂಬದಿಂದ ಬಂದಿದ್ದು ಅವರ ಚೊಚ್ಚಲ ನಿರ್ಮಾಣದ ಚಿತ್ರ ಇದಾಗಿದೆ. ಸಾಗರ್, ರಕ್ಷಿತ, ಮಲ್ಲರಾಜು, ಚಿರಂಜೀವಿ, ಹರೀಶ್, ಗೌತಮ್, ಮುತ್ತುರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 