ಶೀಘ್ರದಲ್ಲೇ ಬೆಳ್ಳಿತೆರೆಗೆ ‘ಆನೆಬಲ‘
anebal
ಬೆಂಗಳೂರು, ಡಿ 23- ಜನತಾ ಟಾಕೀಸ್ ಅವರ ಚೊಚ್ಚಲ ನಿರ್ಮಾಣದ ‘ಆನೆಬಲ‘ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ
ಇದು ಹೊಸ ಪ್ರತಿಭೆಗಳ ಚಿತ್ರವಾಗಿದ್ದು, ಡಾ ವಿ ನಾಗೇಂದ್ರ ಪ್ರಸಾದ್ ರಚನೆಯ ‘ಮುದ್ದೆ ಮುದ್ದೆ‘ ಹಾಗೂ ‘ಮಳವಳ್ಳಿ ಜಾತ್ರೇಲಿ‘ ಹಾಡುಗಳು ಈಗಾಗಲೇ ಜನಪ್ರಿಯವಾಗಿವೆ ಅನೇಕ ಹೊಸ ಅಂಶಗಳನ್ನು ಹೊತ್ತು ಬರುತ್ತಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆಗಳಿವೆ
ಸೂನಗಹಳ್ಳಿ ರಾಜು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ‘ಲೂಸಿಯಾ‘ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು, ಯೋಗರಾಜ್ ಭಟ್ ಒಂದು ಹಾಡನ್ನು ಬರೆದಿದ್ದಾರೆ. ಜೆ.ಟಿ.ಬೆಟ್ಟೇಗೌಡ ಛಾಯಾಗ್ರಹಣ, ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ.
ನಿರ್ಮಾಪಕರಾದ ಎ.ವಿ.ವೇಣುಗೋಪಾಲ್ ಅಡಕಿಮಾರನಹಳ್ಳಿ ಅವರು ರೈತಾಪಿ ಕುಟುಂಬದಿಂದ ಬಂದಿದ್ದು ಅವರ ಚೊಚ್ಚಲ ನಿರ್ಮಾಣದ ಚಿತ್ರ ಇದಾಗಿದೆ. ಸಾಗರ್, ರಕ್ಷಿತ, ಮಲ್ಲರಾಜು, ಚಿರಂಜೀವಿ, ಹರೀಶ್, ಗೌತಮ್, ಮುತ್ತುರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 