ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸೌಮ್ಯರೆಡ್ಡಿ ನಿರ್ಧಾರ
ಬೆಂಗಳೂರು, ಮಾ. 21: ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿರುವ ಕಾರಣ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಾ.9 ರಂದು ನಡೆದ 14ನೇ ವನ್ಯಜೀವಿ ಮಂಡಳಿ ಸಭೆಯಲ್ಲಿ ಪರಿಸರವಾದಿಗಳು ಮತ್ತು ಮಂಡಳಿಯ ಕೆಲ ಸದಸ್ಯರಿಂದ ತೀವ್ರ ವಿರೋಧಕ್ಕೊಳಗಾಗಿದ್ದ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಪರಿಸರವಾದಿಗಳ ವಿರೋಧದ ಮಧ್ಯೆಯೂ ಯೋಜನೆ ಪರ ತೀರ್ಮಾನ ಕೈಗೊಳ್ಳಲಾಗಿದ್ದು, ಯೋಜನೆ ಬೆಂಬಲಿಸಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಲವಾರು ರಾಜಕೀಯ ಒತ್ತಡಗಳಿಂದ ಹಾಗೂ ಕಾಣದ ಕೈಗಳ ಕೈವಾಡದಿಂದ ಮತ್ತೆ ಯೋಜನೆ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಮತ್ತೊಮ್ಮೆ ಸಭೆ ನಡೆಸಿದ್ದಾರೆ. ಬೇರೆ ಮಾರ್ಗವಿದ್ದರೂ ಈ ಯೋಜನೆಯನ್ನು ಏಕೆ ಮಾಡಿದ್ದು ಹಾಗೂ ಸಭೆಯಲ್ಲಿ ಅರಣ್ಯ ಸಚಿವರೇ ಗೈರು ಹಾಜರಾಗಿದ್ದರು. ರಾಜ್ಯ ವನ್ಯಜೀವಿ ಮಂಡಳಿ ಅಸ್ತಿತ್ವದಲ್ಲಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಈ ಯೋಜನೆ ಜಾರಿಗೆ ಬಂದರೆ ಮರಗಳ ಮಾರಣಹೋಮದಿಂದ ಮುಂದೆ ಪರಿಸರದ ಮೇಲಾಗುವ ದುಷ್ಪರಿಣಾಮಗಳಿಗೆ ಸರ್ಕಾರದ ಈ ನಿರ್ಧಾರವೇ ಕಾರಣವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.ಈ ಯೋಜನೆಯನ್ನು ಮುಖ್ಯಮಂತ್ರಿಗಳು ಜಾರಿಗೆ ತರಲು ನಿರ್ಧರಿಸಿರುವುದರಿಂದ ನಾನು ನನ್ನ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸುತ್ತಿರುವುದಾಗಿ ಸೌಮ್ಯಾರೆಡ್ಡಿ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅರಣ್ಯ ಸಚಿವರಿಗೆ ಪತ್ರ ನೀಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 