ಕೋವಿಡ್ -19ನಿಂದ ದಕ್ಷಿಣ ಆಫ್ರಿಕಾ ತಂಡ ಪಾರು
ಜೋಹಾನ್ಸ್ ಬರ್ಗ್, ಏ 3,ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಮಾರ್ಚ್ನಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಕ್ರಿಕೆಟ್ ಸರಣಿ ರದ್ದಾಯಿತು. ಆ ಸರಣಿ ಮಧ್ಯದಲ್ಲೇ ತಾಯ್ನಾಡಿಗೆ ಹಿಂದಿರುಗಿದ್ದ ಹರಿಣ ಪಡೆಯ ಆಟಗಾರರನ್ನು ಅಲ್ಲಿನ ಸರಕಾರ 14 ದಿನಗಳ ಕಾಲ ಕ್ವಾರಂಟೈನ್( ದಿಗ್ಬಂಧನ)ನಲ್ಲಿ ಇರಿಸಿತ್ತು.
ಇದೀಗ ತಂಡದ ಎಲ್ಲ ಆಟಗಾರರ ವೈದ್ಯಕೀಯ ವರದಿ ಬಂದಿದ್ದು ಯಾವುದೇ ಆಟಗಾರರಲ್ಲಿ ಕೊರೊನಾ ವೈರಸ್ನ ಲಕ್ಷಣಗಳು ಕಂಡು ಬಂದಿಲ್ಲದಿರುವುದನ್ನು ದ. ಆಫ್ರಿಕಾ ತಂಡ ಮುಖ್ಯ ವೈದ್ಯಾಧಿಕಾರಿ ಡಾ. ಶೌಯೇಬ್ ಮಾಂಜ್ರಾ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 18ರಂದು ತಾಯ್ನಾಡಿಗೆ ಹಿಂದಿರುಗಿದ್ದ ಆಟಗಾರರು ಈ ಮೂಲಕ 14 ದಿನಗಳ ಕ್ವಾರಂಟೈನ್ ಸೆರೆವಾಶವನ್ನು ಪೂರ್ಣಗೊಳಿಸಿದ್ದಾರೆ. "ಎಲ್ಲ ಆಟಗಾರರನ್ನು ಪರೀಕ್ಷಿಸಲಾಗಿದ್ದು, ಸೋಂಕಿನ ಯಾವುದೇ ಗುಣಲಕ್ಷಣಗಳು ಕಂಡು ಬಂದಿಲ್ಲ. ಕೋವಿಡ್-19 ಪರೀಕ್ಷೆಗಳಲ್ಲಿ ನೆಗೇಟೀವ್ ಎಂದು ಸಾಬೀತಾಗಿದೆ," ಎಂದು ಮಾಂಜ್ರಾ ಹೇಳಿಕೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 