ಕೋವಿಡ್ -19ನಿಂದ ದಕ್ಷಿಣ ಆಫ್ರಿಕಾ ತಂಡ ಪಾರು
ಜೋಹಾನ್ಸ್ ಬರ್ಗ್, ಏ 3,ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಮಾರ್ಚ್ನಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಕ್ರಿಕೆಟ್ ಸರಣಿ ರದ್ದಾಯಿತು. ಆ ಸರಣಿ ಮಧ್ಯದಲ್ಲೇ ತಾಯ್ನಾಡಿಗೆ ಹಿಂದಿರುಗಿದ್ದ ಹರಿಣ ಪಡೆಯ ಆಟಗಾರರನ್ನು ಅಲ್ಲಿನ ಸರಕಾರ 14 ದಿನಗಳ ಕಾಲ ಕ್ವಾರಂಟೈನ್( ದಿಗ್ಬಂಧನ)ನಲ್ಲಿ ಇರಿಸಿತ್ತು.
ಇದೀಗ ತಂಡದ ಎಲ್ಲ ಆಟಗಾರರ ವೈದ್ಯಕೀಯ ವರದಿ ಬಂದಿದ್ದು ಯಾವುದೇ ಆಟಗಾರರಲ್ಲಿ ಕೊರೊನಾ ವೈರಸ್ನ ಲಕ್ಷಣಗಳು ಕಂಡು ಬಂದಿಲ್ಲದಿರುವುದನ್ನು ದ. ಆಫ್ರಿಕಾ ತಂಡ ಮುಖ್ಯ ವೈದ್ಯಾಧಿಕಾರಿ ಡಾ. ಶೌಯೇಬ್ ಮಾಂಜ್ರಾ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 18ರಂದು ತಾಯ್ನಾಡಿಗೆ ಹಿಂದಿರುಗಿದ್ದ ಆಟಗಾರರು ಈ ಮೂಲಕ 14 ದಿನಗಳ ಕ್ವಾರಂಟೈನ್ ಸೆರೆವಾಶವನ್ನು ಪೂರ್ಣಗೊಳಿಸಿದ್ದಾರೆ. "ಎಲ್ಲ ಆಟಗಾರರನ್ನು ಪರೀಕ್ಷಿಸಲಾಗಿದ್ದು, ಸೋಂಕಿನ ಯಾವುದೇ ಗುಣಲಕ್ಷಣಗಳು ಕಂಡು ಬಂದಿಲ್ಲ. ಕೋವಿಡ್-19 ಪರೀಕ್ಷೆಗಳಲ್ಲಿ ನೆಗೇಟೀವ್ ಎಂದು ಸಾಬೀತಾಗಿದೆ," ಎಂದು ಮಾಂಜ್ರಾ ಹೇಳಿಕೆ ನೀಡಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 