ಮುಂಚಿತವಾಗಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆ
Southwest monsoon expected to start early in Kerala
ಹೊಸದಿಲ್ಲಿ 20: ಕಳೆದ ವಾರ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ, ಮೇ 27 ಕ್ಕಿಂತ ಮುಂಚಿತವಾಗಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆಯಿದೆ.
ಮಂಗಳವಾರ
ಈ ಬಗ್ಗೆ ಐಎಂಡಿ ಮಾಹಿತಿ ನೀಡಿದ್ದು, ಸದ್ಯದ ಪರಿಸ್ಥಿತಿ ಪ್ರಕಾರ ನೈಋತ್ಯ ಮಾನ್ಸೂನ್ 4-5 ದಿನಗಳು ಬೇಗನೇ ಆರಂಭವಾಗಬಹುದು ಎಂದಿದೆ.
ಒಂದು
ವೇಳೆ ಇದು ನಿಜವಾಗಿದ್ದರೆ, ಈ ವರ್ಷದ ಮಾನ್ಸೂನ್
2010 ರ ನಂತರ ಮೊದಲ ಬಾರಿ ಬೇಗನೇ ಆರಂಭವಾಗಲಿದೆ.
ಸಾಮಾನ್ಯವಾಗಿ
ಕೇರಳದಲ್ಲಿ ಮಳೆ ಆರಂಭವಾಗುವ ದಿನಾಂಕ ಜೂನ್ 1. ಇದು ದೇಶದಲ್ಲಿ ನಾಲ್ಕು ತಿಂಗಳ ಕಾಲ ನಡೆಯುವ ನೈಋತ್ಯ ಮಾನ್ಸೂನ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಮಾನ್ಸೂನ್ ಮಾರುತಗಳು ಬಲಗೊಳ್ಳುತ್ತಿದ್ದಂತೆ, ದೇಶದ ಉಳಿದ ಭಾಗಗಳಿಗೆ ಮಾನ್ಸೂನ್ ಮುಂದುವರಿಯುತ್ತದೆ. ಜುಲೈ ಮಧ್ಯದ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ.
“ಸಾಗರ
ಮತ್ತು ವಾತಾವರಣದ ಎಲ್ಲಾ ಅಂಶಗಳು ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದೆ” ಎಂದು ಐಎಂಡಿಯ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಮೇ
22 ರ ಸುಮಾರಿಗೆ ಕರ್ನಾಟಕ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 