ಮುಂಚಿತವಾಗಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆ
Southwest monsoon expected to start early in Kerala
ಹೊಸದಿಲ್ಲಿ 20: ಕಳೆದ ವಾರ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ, ಮೇ 27 ಕ್ಕಿಂತ ಮುಂಚಿತವಾಗಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆಯಿದೆ.
ಮಂಗಳವಾರ
ಈ ಬಗ್ಗೆ ಐಎಂಡಿ ಮಾಹಿತಿ ನೀಡಿದ್ದು, ಸದ್ಯದ ಪರಿಸ್ಥಿತಿ ಪ್ರಕಾರ ನೈಋತ್ಯ ಮಾನ್ಸೂನ್ 4-5 ದಿನಗಳು ಬೇಗನೇ ಆರಂಭವಾಗಬಹುದು ಎಂದಿದೆ.
ಒಂದು
ವೇಳೆ ಇದು ನಿಜವಾಗಿದ್ದರೆ, ಈ ವರ್ಷದ ಮಾನ್ಸೂನ್
2010 ರ ನಂತರ ಮೊದಲ ಬಾರಿ ಬೇಗನೇ ಆರಂಭವಾಗಲಿದೆ.
ಸಾಮಾನ್ಯವಾಗಿ
ಕೇರಳದಲ್ಲಿ ಮಳೆ ಆರಂಭವಾಗುವ ದಿನಾಂಕ ಜೂನ್ 1. ಇದು ದೇಶದಲ್ಲಿ ನಾಲ್ಕು ತಿಂಗಳ ಕಾಲ ನಡೆಯುವ ನೈಋತ್ಯ ಮಾನ್ಸೂನ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಮಾನ್ಸೂನ್ ಮಾರುತಗಳು ಬಲಗೊಳ್ಳುತ್ತಿದ್ದಂತೆ, ದೇಶದ ಉಳಿದ ಭಾಗಗಳಿಗೆ ಮಾನ್ಸೂನ್ ಮುಂದುವರಿಯುತ್ತದೆ. ಜುಲೈ ಮಧ್ಯದ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ.
“ಸಾಗರ
ಮತ್ತು ವಾತಾವರಣದ ಎಲ್ಲಾ ಅಂಶಗಳು ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದೆ” ಎಂದು ಐಎಂಡಿಯ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಮೇ
22 ರ ಸುಮಾರಿಗೆ ಕರ್ನಾಟಕ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 