ಸಭಾಪತಿ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ
Speaker Horatti distributes three-wheelers
ಗದಗ 11 : ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಕಲಚೇತನ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.
ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಖರೀದಿಸಲಾದ ಎರಡು ವಾಹನಗಳನ್ನು ವಿತರಿಸಿ ನಂತರ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಅರ್ಹರು ಪಡೆದು ಅಭಿವೃದ್ಧಿ ಹೊಂದಬೇಕು. ತ್ರಿಚಕ್ರ ವಾಹನ ಸದ್ಭಳಕೆ ಸರಿಯಾಗಿ ಮಾಡಿಕೊಳ್ಳುವಂತೆ ತಿಳಿಸಿದರು.ತ್ರಿಚಕ್ರ ವಾಹನಗಳನ್ನು ಸರಿಯಾಗಿ ಇಟ್ಟುಕೊಂಡು ಜೀವನ ಸಾಗಿಸಲು ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿ ಪಂ ಮುಖ್ಯ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ, ಜಿಲಗಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ವಾರ್ತಾಧಿಕಾರಿ ವಸಂತ ಮಡ್ಲೂರ, ಅವ್ವ ಟ್ರಸ್ಟ್ ಸಂಚಾಲಕ ಬಸವರಾಜ ದಾರವಾಡ, ಪಕ್ಕಿರ್ಪ ಕೌಜಗೇರಿ, ನಾಜಿಯಾ ಅಬ್ಬಿಗೇರಿ, ಇಲಾಖೆಯ ಸಿಬ್ಬಂದಿ ವರ್ಗ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 