ಅಪೌಷ್ಟಿಕತೆ ವಿರುದ್ಧ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಸ್ಪೀಕರ್ ಮನವಿ
ನವದೆಹಲಿ 2: ಅಪೌಷ್ಟಿಕತೆಯ ವಿರುದ್ಧ, ವಿಶೇಷವಾಗಿ, ನವಜಾತ ಶಿಶುಗಳ ಅಪೌಷ್ಟಿಕತೆಯ ವಿರುದ್ಧ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಪಕ್ಷಾತೀತವಾಗಿ ಎಲ್ಲ ಸಂಸದರು ಕೈಜೋಡಿಸಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮನವಿ ಮಾಡಿದ್ದಾರೆ.
ಅವರು ಶೂನ್ಯವೇಳೆಯಲ್ಲಿ ಈ ಹೇಳಿಕೆ ನೀಡಿ , ಜನ ಭಾಗೀದಾರಿ ಕಾರ್ಯಕ್ರಮದಡಿ ಸದಸ್ಯರು ಕ್ರಮ ಕೈಗೊಂಡು ಅಭಿಯಾನದಲ್ಲಿ ಜೊತೆಯಾಗಬೇಕು ಎಂದರು. ಅಭಿಯಾನದಲ್ಲಿ ಸಂಸದರು ಭಾಗಿಯಾಗುವುದರಿಂದ ಆಂದೋಲನ ಯಶಸ್ವಿಯಾಗಿ ಇದರಿಂದ ಅಪೌಷ್ಟಿಕತೆ ಸಮಸ್ಯೆ ನಿವಾರಣೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ, ದೇಶಾದ್ಯಂತ ಮಹಿಳೆಯರು ಮತ್ತು ಮಕ್ಕಳು ಎದುರಿಸುತ್ತಿರುವ ಪೌಷ್ಠಿಕಾಂಶ ಸವಾಲು ಕುರಿತ ಬಗ್ಗೆ ಸ್ಪೀಕರ್ ಕಾಳಜಿಯನ್ನು ಶ್ಲಾಘಿಸಿದರು. ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಗಸ್ಟ್ 1 ರಿಂದ 7 ರವರೆಗೆ ಆಚರಿಸಲಾಗುತ್ತಿದೆ ಆದ್ದರಿಂದ ವಾರದಲ್ಲಿ ತಾಯಂದಿರು ಪೌಷ್ಠಿಕಾಂಶ ಮತ್ತು ಆರೋಗ್ಯದ ಬಗ್ಗೆ ಮಾತನಾಡುವುದು ಸೂಕ್ತವಾಗಿದೆ ಎಂದರು "ಮಕ್ಕಳ ಸ್ತನ್ಯಪಾನವನ್ನು ಉತ್ತೇಜಿಸಲು ಆಹಾರ ಮತ್ತು ಪೌಷ್ಟಿಕಾಂಶ ಮಂಡಳಿಯು ಕೈಗೊಂಡ ಅಭಿಯಾನ ಪ್ರೋತ್ಸಾಹ ಸಹಕರಿಸಬೇಕು ಎಂದು ಸದದ್ಯರಿಗೆ ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರವೇ ಆರೋಗ್ಯ ಮತ್ತು ಪೌಷ್ಠಿಕಾಂಶದ ಬಗ್ಗೆ ಕಾಳಜಿ ವಹಿಸಿದ್ದಾರೆ ಎನ್ನುವುದು ಸರಿಯಲ್ಲ ಅವರು ಈ ಹಿಂದೆ ಗುಜರಾತ್ ಮುಖ್ಯಮಂತ್ರಿ ಯಾಗಿದ್ದಲೂ ಅವರು ಇದೆ ರೀತಿ ಕಾಳಜಿ ವಹಿಸಿದ್ದರು ಎಂದೂ ಸಚಿವೆ ಇರಾನಿ ಹೇಳಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 