10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ನಾಯ್ಡು
ನವದೆಹಲಿ 19: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿಮರ್ಿಸಿದ್ದಾರೆ.
ಬುಧವಾರ ಆರಂಭವಾದ ರಾಜ್ಯಸಭೆ ಕಲಾಪದಲ್ಲಿ ವೆಂಕಯ್ಯ ನಾಯ್ಡು ಅವರು, ಯಾವುದೋ ಒಂದು ವಿಚಾರಕ್ಕೆ ಸಂಬಂಧಿಸಿದ ಘೋಷಣೆ ಮಾಡುವಾಗ ಬಂಗಾಳಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾತನಾಡಿದ್ದು, ಇದು ಹೊಸ ದಾಖಲೆಯಾಗಿ ಮಾರ್ಪಟ್ಟಿದೆ.
ಇದೇ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಜ್ಯಸಭೆ ಕಲಾಪದಲ್ಲಿ 22 ಭಾಷೆಗಳಲ್ಲಿ ಮಾತನಾಡಬಹುದು ಎಂದು ಪ್ರಕಟಿಸಿರು. ಆದರೆ ಸದಸ್ಯರು ಮಾತನಾಡುವಾಗ ಸಚಿವಾಲಯದ ಗಮನಕ್ಕೆ ತರಬೇಕಾಗುತ್ತದೆ ಎಂದೂ ನಾಯ್ಡು ಮಾಹಿತಿ ನೀಡಿದರು.
ರಾಜ್ಯಸಭೆಯಲ್ಲಿ ಈ ಮೊದಲು ರಾಜ್ಯಸಭೆಯಲ್ಲಿ ಅಸ್ಸಾಮೀ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒರಿಯಾ, ಪಂಜಾಬಿ, ತಮಿಳು , ತೆಲುಗು , ಉದರ್ು ಸೇರಿದಂತೆ 17 ಭಾಷೆಗಳಲ್ಲಿ ಮಾತನಾಡುವ ಅವಕಾಶ ಇತ್ತು. ಇದೀಗ ಹೆಚ್ಚುವರಿಯಾಗಿ ದೋಗ್ರಿ, ಕಾಶ್ಮೀರಿ, ಕೊಂಕಣಿ, ಸಾಂಥಾಲಿ ಮತ್ತು ಸಿಂಧಿ ಭಾಷೆಗಳ ಸೇರ್ಪಡೆಯಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 