ಬಾಣಂತಿಯರ ವಿಶೇಷ ಆಧಾರ ನೊಂದಣಿ ಅಭಿಯಾನ
ಬಾಗಲಕೋಟೆ: ಗಭರ್ಿಣಿ ಹಾಗೂ ಬಾಣಂತಿಯರ ಆಧಾರ ಕಾರ್ಡನಲ್ಲಿರುವ ಹೆಸರು, ವಿಳಾಸ ಹಾಗೂ ಜನ್ಮ ದಿನಾಂಕಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ವಿಶೇಷ ಆಧಾರ ನೊಂದಣಿ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಪ್ರಧಾನಮಂತ್ರಿ ಮಾತೃ ವಂದನಾ ಹಾಗೂ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯ ಫಲಾನುಭವಿಗಳಿಗೆ ಸಹಾಯಧನವನ್ನು ನೇರವಾರಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದ್ದು, ಸದರಿ ಫಲಾನುಭವಿಗಳ ಆಧಾರ ಕಾರ್ಡನಲ್ಲಿರುವ ನೂನ್ಯತೆಗಳಿಂದ ಜಿಲ್ಲೆಯಲ್ಲಿ ಯೋಜನೆಗಳ ಅನುಷ್ಠಾನ ಕುಂಟಿತಗೊಂಡಿರುವದನ್ನು ಮನಗಂಡ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅವರು ಈ ಕುರಿತು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡು ವಿಶೇಷ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಜಿಲ್ಲೆಯಲ್ಲಿ ಮಾತೃ ವಂದನಾ ಹಾಗೂ ಮಾತೃಶ್ರೀ ಯೋಜನೆಯ 428 ಫಲಾನುಭವಿಗಳ ಆಧಾರ ಕಾರ್ಡಗಳಲ್ಲಿ ತಪ್ಪಾಗಿ ಮುದ್ರಗೊಂಡಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿರುವ 18 ಅಟಲ್ಜೀ ಜನಸ್ನೇಹಿ ಕೇಂದ್ರ ಹಾಗೂ ಇ-ಆಡಳಿತದ 2 ಆಧಾರ ನೊಂದಣಿ ಕಿಟ್ಗಳ ಮೂಲಕ ಎರಡು ದಿನಗಳ ಕಾಲ ವಿಶೇಷ ನೊಂದಣಿ ಅಭಿಯಾನ ಮೂಲಕ 80 ಫಲಾನುಭವಿಗಳ ಆಧಾರ ಕಾರ್ಡನಲ್ಲಿರುವ ನೂನ್ಯತೆಗಳನ್ನು ಸರಿಪಡಿಸಲಾಗಿದೆ. ಈ ಅಭಿಯಾನ ನಿರಂತರವಾಗಿದ್ದು, ಗಭರ್ಿಣಿ ಮತ್ತು ಬಾಣಂತಿಯರಿಗೆ ಪ್ರಥಮ ಆಧ್ಯತೆ ಮೇರೆಗೆ ಆಧಾರ ಕಾರ್ಡನಲ್ಲಿರುವ ನೂನ್ಯತೆಗಳನ್ನು ಸರಿಪಡಿಸಲಾಗುತ್ತಿದ್ದು, ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಜಿ.ಪಂ ಸಿಇಓ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 