ನಾಗರಾಳದಲ್ಲಿ ವಿಶೇಷ ಯೋಗ ದಿನಾಚರಣೆ: ಪಾಟೀಲ
Special Yoga Day celebration in Nagarala: Patil
ರನ್ನ ಬೆಳಗಲಿ 19: ಪ್ರಧಾನಿ ಮೋದಿಜಿಯವರು ಜಗತ್ತಿಗೆ ನಮ್ಮ ಯೋಗದ ಮಹತ್ವ ಪರಿಚಯಿಸಿದ ದಿನದಲ್ಲಿ ನಮ್ಮ ಗ್ರಾಮಗಳಲ್ಲಿ ಯೋಗದ ಮಹತ್ವ ಸಾರುವ ನಿಟ್ಟಿನಲ್ಲಿ ವಿಶ್ವ ಯೋಗ ದಿನವನ್ನು ನಾಗರಾಳದ ಗ್ರಾಪಂ ಹಾಗೂ ಶಾಲಾ ಕಾಲೇಜುಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಾಗರಾಳ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಗ್ರಾಮದಲ್ಲಿ ಜೂ.21 ರಂದು ಬೆ.6 ಗಂಟೆಗೆ ಈ ಬಾರಿ ವಿಶೇಷ ಆಚರಣೆ ಹಮ್ಮಿಕೊಂಡಿದ್ದು ಸರ್ವರೂ ಸದು ಆಯೋಗಪಡಿಸಿಕೊಳ್ಳಬೇಕೆಂದು ಮಾದಡವಾನಂದ ವಿದ್ಯಾವರ್ಧಕ ಟ್ರಸ್ಟ್ ಹಾಗೂ ಶಾಲಾ ಕಾಲೇಜು ಒಕ್ಕೂಟಗಳ ಅಧ್ಯಕ್ಷ ಆರಿ್ಟ.ಪಾಟೀಲ ಹೇಳಿದರು.
ಸ್ಥಳೀಯ ಮಾಧವಾನಂದ ವಿವಿದೋದ್ದೇಶ ಸಂಘದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಂಚೂರ ಸವಿತಾ ಪೀಠದ ಸವಿತಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ, ಆರಿ್ಟ.ಪಾಟೀಲ ಅಧ್ಯಕ್ಷತೆಯಲ್ಲಿ ಸಚಿವ ಆರಿ್ಬ.ತಿಮ್ಮಾಪುರ ಉದ್ಘಾಟಿಸಿ, ಸಂಸದ ಗೋವಿಂದ ಕಾರಜೋಳ, ಪದ್ಮಶ್ರೀ ಪುರಸ್ಕೃತ ವೈದ್ಯೆ ದೇಶಮಾನೆ ವಿಶೇಷ ಉಪಸ್ಥತಿ ವಹಿಸಲಿದ್ದು, ಗ್ರಾಪಂ ಅಧ್ಯಕ್ಷೆ ಪಾರ್ವತಿ ತೇಲಿ, ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಎಂ.ಮುಲ್ಲಾ, ಪಿಡಿಒ ರಂಜಿತಾ ಹಟ್ಟಿ. ಪತ್ರಕರ್ತ ನಾರಾಯಣಗೌಡ ಉತ್ತಂಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ತಿಳಿಸಿದರು.ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಹುನ್ನೂರ, ಮುಖಂಡರಾದ ಈರಣ್ಣ ಅರಗಂಜಿ, ಬಸವರಾಜ ರೊಳ್ಳಿ, ಮಂಜುಳಾ ಸುಳ್ಳದ, ಯಲ್ಲಪ್ಪ ಸೂರ್ಯವಂಶಿ, ದುಂಡಪ್ಪ ಕೈಪಾಳಿ, ಯಲ್ಲಪ್ಪ ಮಾರಾಪುರ, ಮಲ್ಲಪ್ಪ ಹಸಬಿ ,ಶಿರಾಜ ಹೊರಟ್ಟಿ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 