ಹುಲಗೂರ ಜಿ.ಪಂ. ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುಧಾನ : ಪಠಾಣ
Special attention for the development of Hulagur G.P. roads: Pathana
ಹುಲಗೂರ ಜಿ.ಪಂ. ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುಧಾನ : ಪಠಾಣ
ಶಿಗ್ಗಾವಿ 06 : ಹುಲಗೂರ ಜಿಪಂ ಕ್ಷೇತ್ರದವ್ಯಾಪ್ತಿಯ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ಹಂತವಾಗಿ 3 ಮೊದಲ ಕೋಟಿ ವೆಚ್ಚದಲ್ಲಿ ಪಾಣಿಗಟ್ಟಿ-ಹುಲಗೂರ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 58 ಲಕ್ಷ ರೂ.ಗಳಲ್ಲಿ ಪಾಣಿಗಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದಾಗಿ ಶಾಸಕ ಯಾಸೀರಖಾನ್ ಪಠಾಣ ಹೇಳಿದರು. ತಾಲೂಕಿನ ಪಾಣಿಗಟ್ಟಿ ಹುಲಗೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ 15ನೇ ಹಣಕಾಸು ಯೋಜನೆಯಡಿ 18 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಹುಲಗೂರ ಗ್ರಾಪಂ ಸಭೆ ಸಭಾಂಗಣ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಬೆಳವಣಿಗೆ ಮತ್ತು ವ್ಯಾಪಾರ ವಹಿವಾಟುಗಳು ಹೆಚ್ಚಳವಾಗಲಿದೆ. ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಲೋಕೋಪಯೋಗಿ ಮಂಜೂರಾತಿಗೆ ಸಚಿವರಿಗೆ ಹುಲಗೂರ ಗ್ರಾಪಂ ಸಭೆ ಸಭಾಂಗಣ ಕೊಠಡಿ ಉದ್ಘಾಟನೆಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಭಾಗದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಈಗಾಗಲೇ ಪಟ್ಟಿ ಮಾಡಿದ್ದೇನೆ. ಕಾಲಾವ ಕಾಶ ಕೊಡಿ ಎಲ್ಲವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು. ಸ್ಥಳೀಯವಾಗಿ ಗ್ರಾಪಂ ಆಡಳಿತ ಮಂಡಳಿ ಮತ್ತು ಜನರು ನನ್ನೊಂದಿಗೆ ಕೈಜೋಡಿಸಿ ಸಹಕಾರ ನೀಡಿದಲ್ಲಿ ಸಮಸ್ಯೆ ರ್ಮು ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಆಡಳಿತ ಕೊಂಡೊಯ್ಯುತ್ತಿದ್ದೇನೆ. ತಮ್ಮ ವೇಗಕ್ಕೆ ತಕ್ಕಂತೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಪಠಾಣ ಕೋರಿದರು. ಮುಖಂಡರಾದ ಗುಡ್ಡಪ್ಪ ಜಲದಿ, ಮಾಲತೇಶ ಸಾಲಿ, ಎಸ್.ಎಫ್.ಮಣಕಟ್ಟಿ, ಅಶೋಕ ಓಲೇಕಾರ ಸೇರಿದಂತೆ ಗ್ರಾಪಂ ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 