ಬಾಂಗ್ಲಾ ಉಗ್ರರ ಡಿಎನ್ ಎ ಪರೀಕ್ಷೆಗೆ ವಿಶೇಷ ನ್ಯಾಯಾಲಯ ಅನುಮತಿ
ಬೆಂಗಳೂರು, ಅ 5: ಬೆಂಗಳೂರಿನಲ್ಲಿ ಬಂಧಿತರಾಗಿದ್ದ ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ" ಸಂಘಟನೆಯ ಮೂವರು ಉಗ್ರರ ಡಿಎನ್ಎ ಪರೀಕ್ಷೆಗೆ ಎನ್ ಐ ಎ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಈ ಸಂಬಂಧ ಎನ್ ಐ ಎ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ಮೇಲಿನ ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ, ಕಾನೂನು ಪ್ರಕಾರ ವೈದ್ಯಕೀಯ ತಪಾಸಣೆ ಹಾಗೂ ಡಿಎನ್ಎ ಪರೀಕ್ಷೆ ನಡೆಸಲು ಎನ್ಐಎ ಅಧಿಕಾರಿಗಳಿಗೆ ಅನುಮತಿ ನೀಡಿದ್ದಾರೆ.
ಎನ್ಐಎ ಪರ ವಕೀಲರು ಪಿ.ಪ್ರಸನ್ನಕುಮಾರ್, ಆರೋಪಿಗಳು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅರಣ್ಯ ಪ್ರದೇಶದ ಗುಹೆಗಳಲ್ಲಿ ಪರೀಕ್ಷಾರ್ಥ ರಾಕೆಟ್ ಗಳನ್ನು ಉಡಾವಣೆ ಮಾಡಿದ್ದಾರೆ. ಆರೋಪಿಗಳಿಂದ ಅತ್ಯಾಧುನಿಕ ಗ್ರೆನೇಡ್ ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯಕ್ಕೆ ವಿವರಿಸಿದರು.
ತನಿಖೆ ವೇಳೆ ಅರಣ್ಯ ಪ್ರದೇಶ ಮತ್ತು ಗುಹೆಗಳಲ್ಲಿ ಹಾಗೂ ಸ್ಫೋಟಕ ವಸ್ತಯಗಳ ಮೇಲೆ ಹೆಪ್ಪುಗಟ್ಟಿದ ರಕ್ತದ ಕಲೆಗಳು, ಬೆರಳಚ್ಚುಗಳು ಪತ್ತೆಯಾಗಿವೆ. ಇವು ಆರೋಪಿಗಳದ್ದೇ ಹೌದೋ ಅಲ್ಲವೊ ಎಂಬುದನ್ನು ಜೊತೆ ಪರೀಕ್ಷಿಸಬೇಕು. ಆದ್ದರಿಂದ, ಡಿಎನ್ಎ ಪರೀಕ್ಷೆ ಅಗತ್ಯವಿದ್ದು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ನಡೆಸಲಾಗಿದ್ದ ರಾಕೆಟ್ ಉಡಾವಣೆ ಪ್ರಕರಣ ಭೇದಿಸುತ್ತಿದ್ದ ಎನ್ಐಎ ಪೊಲೀಸರು ನಗರದಲ್ಲಿ ಉಗ್ರರ ಇರುವಿಕೆಯ ಸುಳಿವಿನ ಮೇರೆಗೆ ಜಾಲಾಡಿದ್ದರು. ಚಿಕ್ಕಬಾಣಾವರದಲ್ಲಿ ನೆಲೆಸಿದ್ದ ಉಗ್ರ ನಜೀರ್ ಶೇಖ್, ಜಹೀದುಲ್ಲಾ ಇಸ್ಲಾಂ ಮತ್ತು ಆರೀಫ್ ಹುಸೇನ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 