ವಿಶೇಷ ಪೂಜೆ ಸಲ್ಲಿಸಿ ಮಕ್ಕಳಿಗೆ ಉಡಿ ತುಂಬುವ ಕಾರ್ಯಕ್ರಮ
Special puja and Udi Filling program for children
ಇಂಡಿ, 30 ; ಹಬ್ಬ ಎನ್ನುವುದು ಅಲಂಕಾರ, ಮೆರವಣಿಗೆಗೆ ಮಾತ್ರವೇ ಸೀಮಿತವಲ್ಲ, ಹಬ್ಬ ನಮ್ಮನ್ನು ಒಗ್ಗೂಡಿಸುತ್ತದೆ. ನಗರದಿಂದ ಗ್ರಾಮ, ಶ್ರೀಮಂತರಿಂದ ಸರಳ ಜೀವಿಯವರೆಗೂ ಕೂಡಿ ಸಂಭ್ರಮಿಸುವುದು ದಸರಾ ಹಬ್ಬದ ವಿಶೇಷತೆ ಎಂದು ನಿರ್ದೇಶಕ ರೇವಣಸಿದ್ಧ ಪೂಜಾರಿ ಹೇಳಿದರು.
ಹೊರ್ತಿ ಸರ್ವೋದಯ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಾಡ ದೇವಿಯ 7 ದಿವಸಗಳ ವಿಶೇಷ ಪೂಜೆಗಳು ನಡೆದ 800 ಮಕ್ಕಳಿಗೆ ಉಡಿ ತುಂಬುವ ಕಾರ್ಯಕ್ರಮ ಚಾಲನೆ ನೀಡಿ ಅವರು ಮಾತನಾಡಿ ದಸರಾ ಹಬ್ಬದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಪ್ರಾಮಾಣಿಕತೆ, ಶಿಸ್ತು, ಧೈರ್ಯ, ತ್ಯಾಗ ಹಾಗೂ ಸೇವಾ ಮನೋಭಾವ ಬೆಳೆಸಬಹುದು ಎಂಬ ಉದ್ದೇಶದಿಂದ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗ ಕೂಡಿಕೊಂಡು ಎಲ್ಲಾ ಮುತ್ತೈದೆಯರು ಸೇರಿ 800 ಕ್ಕು ಹೆಚ್ಚು ಹೆಣ್ಣು ಮಕ್ಕಳು ಉಡಿ ತುಂಬಿ ಪ್ರಸಾದ ಹಂಚಿದರು.
ಎಲ್ಲಾ ಹೆಣ್ಣು ಮಕ್ಕಳು ಸಾಂಪ್ರದಾಯಿಕ ಉಡುಗೆ ತೊಟ್ಟು ಸಭೆಗೆ ಮೆರುಗು ತಂದರು. ಸರ್ವೋದಯ ಸಂಸ್ಥೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಹಾಗು ಬೆಳೆಸುವಲ್ಲಿ ಪ್ರಮುಖ ಪಾತ್ರ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ರೇವಣಸಿದ್ದ ಪೂಜಾರಿ, ನಿರ್ದೇಶಕರಾದ ರಮೇಶ್ ಬಲ್ಲಿದ, ರಾಜಶೇಖರ್ ಎಂ, ಲಕ್ಷ್ಮಣ ಕುಸುಮಾ ಹಿಪ್ಪರಗಿ ದೀಪಾ ತೇಲಿ ಅನಿತಾ ಬಲ್ಲಿದ ವೀರೇಶ ಹಿರೇಮಠ. ಎಂ ಎನ್ ಬೀಳಗಿ, ಉಮೇಶ ಮಾವಿನಮರ ಮಹಾದೇವಿ ತಳವಾರ, ಬಸವರಾಜ ಕೋತ ಶ್ರೀಶೈಲ ಜೇವೂರ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು ಭಾಗವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 