ಆಧ್ಯಾತ್ಮದಿಂದ ವಿಶ್ವಶಾಂತಿ ಸಾಮರಸ್ಯ : ದತ್ತಾವಧೂತ ಶ್ರೀಗಳು
Spirituality leads to world peace and harmony: Dattavadhuta Sri
ಧಾರವಾಡ 12: ದ್ವಂದ್ವಗಳನ್ನು ಅಳಿಸಿ ಹಾಕಿ ಅಂತರಂಗ ಬಹಿರಂಗಗಳಲ್ಲಿ ಅರಿವಿನ ಮಹಾಪ್ರಕಾಶವನ್ನು ಬೆಳಗೆಸುವ ಆಧ್ಯಾತ್ಮದಿಂದ ವಿಶ್ವಶಾಂತಿ ಸಾಮರಸ್ಯ ಸಾಧ್ಯವಾಗುತ್ತದೆ ಎಂದು ಹೆಬ್ಬಳ್ಳಿ ಬ್ರಹ್ಮ ಚೈತನ್ಯ ಆಶ್ರಮದ ಶ್ರೀದತ್ತಾವಧೂತ ಸ್ವಾಮೀಜಿ ಹೇಳಿದರು.
ಅವರು ಹತ್ತಿರದ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿ ದೇವಾಲಯದ 2ನೆಯ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡುತ್ತಿದ್ದರು. ಧರ್ಮ ಸಿದ್ಧಾಂತಗಳ ತತ್ವ, ಚಿಂತನೆ ಮತ್ತು ಆಚರಣೆಗಳಲ್ಲಿ ವೈವಿಧ್ಯತೆಗಳಿದ್ದರೂ ಎಲ್ಲರೂ ಸೇರುವ ಗುರಿ ಮಾತ್ರ ಒಂದೇ ಆಗಿದೆ. ಸಾಕ್ಷಾತ್ಕಾರ ಸಂಪಾದನೆಯಲ್ಲಿ ಮಾನವನ ಬದುಕಿನ ಸಾರ್ಥಕತೆ ಅಡಗಿದೆಯೆಂದು ಅವರು ಹೇಳಿದರು.
ಕಲ್ಬುರ್ಗಿ ಜಿಲ್ಲೆ ಶಹಬಾದ ತಾಲೂಕು ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಹೆಬ್ಬಳ್ಳಿ ಒಂದು ತಪೋತಾಣ; ಜೊತೆಗೆ ಧರ್ಮ ಕ್ಷೇತ್ರವೂ ಆಗಿದೆ. ಇಲ್ಲಿಯ ಹಿರಿಯರು ಹೇಳುವಂತೆ ಹೆಬ್ಬಳ್ಳಿ ಗ್ರಾಮದಲ್ಲಿ ನೂರೊಂದು ಬಾವಿಗಳು ಹಾಗೂ ನೂರೊಂದು ದೇವಾಲಯಗಳು ಇರುವುದು ವಿಶೇಷವಾಗಿದೆ. ಇಲ್ಲಿಯ ಜನಮನದಲ್ಲಿ ಧರ್ಮ ಮತ್ತು ಭಗವಂತನ ಅಸ್ತಿತ್ವದಲ್ಲಿ ಬಲವಾದ ನಂಬಿಕೆ ಹಾಗೂ ಭಕ್ತಿ ಮೇಳೈಸಿರುವುದು ಎದ್ದುಕಾಣುತ್ತದೆ ಎಂದರು.
ಮಣಕವಾಡದ ಶ್ರೀಅಭಿನವ ಮೃತ್ಯುಂಜಯ ಸ್ವಾಮೀಜಿ ಶಿಷ್ಯರಾದ ಶ್ರೇಷ್ಠ ದೇವರು ವೇದಿಕೆಯಲ್ಲಿದ್ದರು. ಶ್ರೀಶೈಲ ಲಕ್ಕಮ್ಮನವರ ಸ್ವಾಗತಿಸಿದರು. ಗಿರಿಮಲ್ಲಯ್ಯ ನಂದಿಕೋಲಮಠ ನಿರೂಪಿಸಿದರು. ಶಿವಾನಂದ ಹೂಗಾರ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 