ಕ್ರೀಡೆ ವ್ಯಕ್ತಿತ್ವ ರೂಪಿಸುವಲ್ಲಿ ಸಹಕಾರಿ: ಮೊಹಮ್ಮದ ಜಕ್ರಿಯಾ
ಲೋಕದರ್ಶನ ವರದಿ
ವಿಜಯಪುರ: ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಸಹಕಾರಿಯಾಗಿದ್ದು, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಅನುಕೂಲವಾಗುತ್ತದೆ ಎಂದು ಕಲಬುರಗಿಯ ಬ್ಯಾಡಮಿಂಟನ್ ತರಬೇತುದಾರ ಮೊಹಮ್ಮದ ಜಕ್ರಿಯಾ ಶೇಖ ತಿಳಿಸಿದರು.
ನಗರದ ಸಿಕ್ಯಾಬ ಶಿಕ್ಷಣ ಸಂಸ್ಥೆಯ ಮಲಿಕ್ ಸಂದಲ ಪಾಲಿಟೆಕ್ನಿಕ ವತಿಯಿಂದ ಹಮ್ಮಿಕೊಳ್ಳಲಾದ ಸೆಟಲ್ ಬ್ಯಾಡಮಿಂಟನ್ ಪಂದ್ಯಾವಳಿಯಲ್ಲಿ ಮುಖ್ಯತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕ್ರೀಡೆಗಳಿಂದ ವಿದ್ಯಾಥರ್ಿಗಳಲ್ಲಿ ಸ್ಪಧರ್ಾ ಮಣೋಭಾವನೆ ಮೂಡಿಸುವುದರ ಜೊತೆಗೆ ನಾಯಕತ್ವ ಗುಣವೂ ವೃದ್ಧಿಸುತ್ತದೆ. ಯುವಕರು ವಿದ್ಯಾಥರ್ಿದೆಸೆಯಿಂದಲೇ ಕ್ರೀಡೆಯತ್ತ ಗಮನ ಹರಿಸಬೇಕು. ಉತ್ತಮ ಕ್ರೀಡಾಪಟುಗಳಾಗುವುದರಿಂದಲೂ ನಿಮ್ಮ ಭವಿಷ್ಯ ರೂಪಿಸಿಕೊಳ್ಳಬಹುದು. ವಿದ್ಯಾಥರ್ಿಗಳಲ್ಲಿ ಸದಾ ಸಾಧಿಸುವ ಛಲ ಹೊಂದಿರಬೇಕು. ಕ್ರೀಡೆಗಳಲ್ಲಿ ಸೋಲು ಗೆಲವು ಮುಖ್ಯವಲ್ಲ ಪಾಲ್ಗೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಎರಡು ದಿನಗಳ ಕಾಲ ನಡೆಯುವ ಸೆಟಲ್ ಬ್ಯಾಡಮಿಂಟನ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಎಲ್ಲ ಸ್ಪಧರ್ಾಥರ್ಿಗಳು ಉತ್ತಮ ಪ್ರದರ್ಶನ ನೀಡಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಧಾನ ಕಾರ್ಯದಶರ್ಿ ಎ ಎಸ್ ಪಾಟೀಲ ಸುವರ್ಣ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ ಬ್ಯಾಡಮಿಂಟನ್ ಪಂದ್ಯಾವಳಿ ಆಯೋಜಿಸಿರುವುದು ಸ್ವಾಗತಾರ್ಹವಾಗಿದೆ ಸ್ಪಧರ್ಾಳುಗಳು ಉತ್ತಮ ಪ್ರದರ್ಶನ ನೀಡಿ ಹೆಸರು ತರಬೇಕು ಎಂದು ಕರೆ ನೀಡಿದರು.
ಪಂದ್ಯಾಳಿಯಲ್ಲಿ ಸಿಕ್ಯಾಬ ಕಾಲೇಜಿನ ಅಂತರ ಕಾಲೇಜುಗಳು ಪಾಲ್ಗೊಂಡಿದ್ದ ಸುಮಾರು 200 ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಮಲಿಕ್ ಸಂದಲ ಪಾಲಿಟೆಕ್ನಿಕ ನ ಪ್ರಾಚಾಯರ್ೆ ನೇತ್ರಾವತಿ ಪುರೋಹಿತ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಘಟಕರಾದ ಅಲ್ತಾಪ ಹುಸೇನ್ ಬಾಗವಾನ, ಎ.ಡಿ.ಮನಿಯಾರ, ಎಂ ಕೆ.ಇನಾಮದಾರ, ಬಸವರಾಜ ತೊರಟ, ಎಸ್ ಬಿ ಗೋಗಿ, ಆರ್.ಎ.ಮುಳವಾಡ, ಸೇರಿದಂತೆ ಮತ್ತೀತರರು ಪಾಲ್ಗೊಂಡಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 