ಕ್ರೀಡಾ ವಿಭಾಗದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
Sports department felicitates meritorious students
ಕ್ರೀಡಾ ವಿಭಾಗದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ಕಲಾದಗಿ 18: ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಾವಿದ್ಯಾಲಯದಲ್ಲಿ ಕ್ರೀಡಾ ವಿಭಾಗದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂತಿಮ ವರ್ಷದ ಬಿ. ಎ. ವಿದ್ಯಾರ್ಥಿನಿಯಾದ ಕು. ಸಂಗೀತ ಕುಳಗೇರಿ, 2023-24, 2024-25, 2025-26ನೇ ಸಾಲಿನಲ್ಲಿ ಮಲ್ಲಗಂಬದ ಸ್ಪರ್ಧೆಯಲ್ಲಿ ವಿಶ್ವವಿದ್ಯಾಲಯದ ಬ್ಲೂ ಆಗಿ, 2024-25ರಲ್ಲಿ ಖೇಲೋ ಇಂಡಿಯಾಕ್ಕೆ ಮಲ್ಲಗಂಬ ಆಟದಲ್ಲಿ ವಿಶ್ವವಿದ್ಯಾಲಯದ ಬ್ಲೂ ಆಗಿ ಆಯ್ಕೆಯಾಗಿ, ಆಟ ಆಡಿರುತ್ತಾಳೆ. ಅಲ್ಲದೆ ಪ್ರಥಮ ವರ್ಷದ ಬಿ. ಎ. ವಿದ್ಯಾರ್ಥಿಯಾದ ಸಂಗಮೇಶ ಯಲಿಗಾರನು 2025-26 ನೇ ಸಾಲಿನಲ್ಲಿ ಕಬಡ್ಡಿ ತಂಡಕ್ಕೆ ವಿಶ್ವವಿದ್ಯಾಲಯದ ಬ್ಲೂ ಆಗಿ ದಕ್ಷಿಣ ಭಾರತದ ಅಂತರ್ ವಿಶ್ವವಿದ್ಯಾಲಯಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಕಬಡ್ಡಿ ತಂಡವನ್ನು ಪ್ರತಿನಿಧಿಸಿ ಆಟ ಆಡಿದ್ದಾನೆ. ಈ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜನೆ ಕುರಿತು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಕೆ. ಎಂ. ಸಾರವಾನ್ ಅವರು ಮಾತನಾಡುತ್ತಾ, ಸಾಧನೆಗೆ ಅವಕಾಶಗಳು ನೂರಾರಿವೆ. ಶಿಸ್ತು ಮತ್ತು ಆಸಕ್ತಿಯ ಮೂಲಕ ಸಂಪಾದಿಸಿಕೊಳ್ಳಬೇಕು. ಜೊತೆಗೆ ಸೂಕ್ತ ಸಮಯದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು. ಈ ಕಾರ್ಯಕ್ರಮದ ಸನ್ಮಾನಿತರು ವಿಶ್ವವಿದ್ಯಾಲಯದ ಬ್ಲೂ ಆಗಿ ಸಾಧಿಸಿರುವ ಸಾಧನೆ ಶ್ಲಾಘನೀಯವಾದದ್ದು ಎಂದಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್. ಬಿ. ಮಹಾಂತೇಶ ಅವರು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುವುದು ಸಂತೋಷದಾಯಕ. ಹೀಗೆ ಇತರ ವಿದ್ಯಾರ್ಥಿಗಳು ಕೂಡ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಡಾ. ಸರೋಜಿನಿ ಹೊಸಕೇರಿ, ಕು. ಯಂಕಮ್ಮ, ಡಾ. ಎಲ್ಲಪ್ಪ. ಜಿ, ಶ್ರೀದೇವಿ ಮುಂಡಗನೂರು, ಡಾ. ಪುಂಡಲೀಕ ಹುನ್ನಳ್ಳಿ, ಡಾ. ಲೋಕಣ್ಣ ಭಜಂತ್ರಿ, ಸಿ. ವೈ. ಮೆಣಸಿನಕಾಯಿ, ರಂಗಪ್ಪ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 