ಮಕ್ಕಳ ಪ್ರತಿಭೆಗೆ ಕ್ರೀಡೆಗಳು ಸಹಾಯಕಾರಿ: ಪುಣ್ಯಕೋಟಿ ಶ್ರೀಗಳು
ಲೋಕದರ್ಶನವರದಿ
ರಾಣೇಬೆನ್ನೂರು-ಜು.29: ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ ಗುರುತಿಸಲು ಕ್ರೀಡಾಕೂಟ ಏರ್ಪಡಿಸಿ ದೇಶದ ಉತ್ತಮ ಕ್ರೀಡಾ ಪಟುಗಳನ್ನು ಗುರುತಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಸ್ಥಳೀಯ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಶ್ರೀಗಳು ಹೇಳಿದರು.
ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ನಡೆದ ಮಾಕನೂರು ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು, ನಿಣರ್ಾಯಕರು ಪ್ರಾಮಾಣಿಕ ನಿರ್ಣಯ ನೀಡಬೇಕು. ಗ್ರಾಮದ ಪ್ರತಿಷ್ಠೆಗೆ ದಾಖಲಿಸಿದ ಮಗುವನ್ನು ಕ್ರೀಡೆಯಲ್ಲಿ ಸೇರ್ಪಡಿಸಿ ವಿನಾಕಾರಣ ಗೊಂದಲಕ್ಕೆ ಆಹ್ವಾನಿಸದೇ ವಾಸ್ತವ ಸ್ಥಿತಿಗೆ ಅವಕಾಶ ಕಲ್ಪಿಸಿ ಎಂದರು.
ಅನುದಾನಿತ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಸಿ.ಕೆ.ಅಕ್ಕಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸಿವುದು ಮುಖ್ಯ, ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಮತ್ತು ಕ್ರೀಡಾ ಮನೋಭಾವನೆಯಿಂದ ಆಟ ಆಡಬೇಕು ಎಂದರು.
ತಾಪಂ ಸದಸ್ಯ ಭೀಮಣ್ಣ ಗೋಣೆಪ್ಪನವರ ಕಾರ್ಯಕ್ರಮ ಉದ್ಘಾಟಿಸಿ ದೈಹಿಕ ಶಿಕ್ಷಕರಿಗೆ ನಿಣರ್ಾಯಕ ಕಿಟ್ ವಿತರಿಸಿದರು. ಗ್ರಾಪಂ ಉಪಾಧ್ಯಕ್ಷ ದಿನೇಶ ಹಳ್ಳಳ್ಳೆಪ್ಪನವರ, ಬಿ.ವಿ.ಶ್ಯಾಮನೂರು, ಮಂಜುಳಾ, ರಾಜು ಹೆಗ್ಗೆಪ್ಪನವರ, ಬಸವಣ್ಣೇಪ್ಪ, ಪುಟ್ಟಪ್ಪ ಹಿರೇಮಠ, ರಾಮಣ್ಣ ಗೋಣೆಪ್ಪನವರ, ಎನ್.ಎನ್.ಅಣ್ಣೇರ, ಶಿವಯ್ಯ ಹಿರೇಮಠ, ನಾಗರಾಜ್ ಹಳ್ಳೆಳ್ಳೆಪ್ಪನವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 