ಆಟವನ್ನು ಹವ್ಯಾಸವಾಗಿ ತೆಗೆದುಕೊಳ್ಳಬೇಕು: ಡಾ. ಯಲಿಗಾರ
ಲೋಕದರ್ಶನ ವರದಿ
ವಿಜಯಪುರ 28: ಆಟವನ್ನು ಹವ್ಯಾಸವಾಗಿ ತೆಗೆದುಕೊಂಡು ಪ್ರತಿಯೊಂದು ಕ್ರೀಡೆಯಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸಮತೋಲನವಾಗಿ ಕಾಯ್ದುಕೊಳ್ಳಬೇಕು ಎಂದು ಡಿವೈಎಸ್ಪಿ ಗೌರವ ಡಾಕ್ಟರೇಟ್ ಬಸವರಾಜ ಯಲಿಗಾರ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಲಯನ್ಸ್ ಪುಟಬಾಲ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 17 ವರ್ಷದ ವಯೋಮಿತಿ ಬಾಲಕರ ಪುಟ್ಬಾಲ್ ಪಂದ್ಯಾವಳಿಯ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಆಟದಲ್ಲಿ ಸೋಲು ಗೆಲುವುದು ಮುಖ್ಯವಲ್ಲ. ಕ್ರೀಡೆಯಲ್ಲಿ ಉತ್ಸುಕರಾಗಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಗಳನ್ನು ಮನೋರಂಜನೆಗಾಗಿ ಆಡಬೇಕು. ನಮ್ಮ ಆರೋಗ್ಯಕ್ಕೆ ಕ್ರೀಡೆಗಳು ಉತ್ತಮವಾಗಿವೆ ಎಂದು ಎಲ್ಲರೂ ಕ್ರೀಡಾಭಿಮಾನವನ್ನು ಹೊಂದಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಫಯಾಜ ಕಲಾದಗಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂತೋಷ ರಾಠೋಡ, ದಾರಾಸಿಂಗ ಪವಾರ, ಐ.ಸಿ.ಪಠಾಣ, ಹಮೀದ ಜಾಗೀರದಾರ, ಗಣೇಶ ಭೋಸಲೆ, ಯಲ್ಲಪ್ಪ ಜಂಪ್ಲೆ, ಮೊಹಮ್ಮದ ಹಿಟ್ನಳ್ಳಿ ಸೇರಿದಂತೆ ಮುಂತಾದವರು ವೇದಿಕೆಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮನೋಜ ದೊಡಮನಿ, ಆಕಾಶ ಅಳಗುಡಕಿ, ಪ್ರಜ್ವಲ ಭೋಸ್ಲೆ ಇದ್ದರು.
ಕಾರ್ಯಕ್ರಮವನ್ನು ಎಂ.ಡಿ. ಹಾದಿಮನಿ ನಿರೂಪಿಸಿದರು, ವಿನಾಯಕ ಶಿಂಗೆ ವಂದಿಸಿದಿರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 