ಆಟವನ್ನು ಹವ್ಯಾಸವಾಗಿ ತೆಗೆದುಕೊಳ್ಳಬೇಕು: ಡಾ. ಯಲಿಗಾರ
ಲೋಕದರ್ಶನ ವರದಿ
ವಿಜಯಪುರ 28: ಆಟವನ್ನು ಹವ್ಯಾಸವಾಗಿ ತೆಗೆದುಕೊಂಡು ಪ್ರತಿಯೊಂದು ಕ್ರೀಡೆಯಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸಮತೋಲನವಾಗಿ ಕಾಯ್ದುಕೊಳ್ಳಬೇಕು ಎಂದು ಡಿವೈಎಸ್ಪಿ ಗೌರವ ಡಾಕ್ಟರೇಟ್ ಬಸವರಾಜ ಯಲಿಗಾರ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಲಯನ್ಸ್ ಪುಟಬಾಲ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 17 ವರ್ಷದ ವಯೋಮಿತಿ ಬಾಲಕರ ಪುಟ್ಬಾಲ್ ಪಂದ್ಯಾವಳಿಯ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಆಟದಲ್ಲಿ ಸೋಲು ಗೆಲುವುದು ಮುಖ್ಯವಲ್ಲ. ಕ್ರೀಡೆಯಲ್ಲಿ ಉತ್ಸುಕರಾಗಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡೆಗಳನ್ನು ಮನೋರಂಜನೆಗಾಗಿ ಆಡಬೇಕು. ನಮ್ಮ ಆರೋಗ್ಯಕ್ಕೆ ಕ್ರೀಡೆಗಳು ಉತ್ತಮವಾಗಿವೆ ಎಂದು ಎಲ್ಲರೂ ಕ್ರೀಡಾಭಿಮಾನವನ್ನು ಹೊಂದಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಫಯಾಜ ಕಲಾದಗಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂತೋಷ ರಾಠೋಡ, ದಾರಾಸಿಂಗ ಪವಾರ, ಐ.ಸಿ.ಪಠಾಣ, ಹಮೀದ ಜಾಗೀರದಾರ, ಗಣೇಶ ಭೋಸಲೆ, ಯಲ್ಲಪ್ಪ ಜಂಪ್ಲೆ, ಮೊಹಮ್ಮದ ಹಿಟ್ನಳ್ಳಿ ಸೇರಿದಂತೆ ಮುಂತಾದವರು ವೇದಿಕೆಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮನೋಜ ದೊಡಮನಿ, ಆಕಾಶ ಅಳಗುಡಕಿ, ಪ್ರಜ್ವಲ ಭೋಸ್ಲೆ ಇದ್ದರು.
ಕಾರ್ಯಕ್ರಮವನ್ನು ಎಂ.ಡಿ. ಹಾದಿಮನಿ ನಿರೂಪಿಸಿದರು, ವಿನಾಯಕ ಶಿಂಗೆ ವಂದಿಸಿದಿರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 