ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಅಗತ್ಯ: ಅಶೋಕ ಅಂಗಡಿ
Sportspersons need encouragement: Ashoka Angadi
ರಾಯಬಾಗ, 26 ; ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದರ ಮೂಲಕ ಕ್ರೀಡಾಕೂಟಗಳನ್ನು ಬೆಳೆಸಬೇಕೆಂದು ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ರಾಯಬಾಗ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕ್ರೀಡಾ ಪಟುಗಳು ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಯಗಳಿಸಿ, ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕೆಂದರು.
ರಾಯಬಾಗ ಗ್ರಾಮೀಣ ಗ್ರಾ.ಪಂ.ಅಧ್ಯಕ್ಷೆ ಮಹಾದೇವಿ ದೀಪಾಳೆ, ಉಪಾಧ್ಯಕ್ಷೆ ಬೇಗಂ ಶಿಂಗೆ, ಪ.ಪಂ.ಸದಸ್ಯ ಸುರೇಶ ಮಾಳಿ, ಕ್ರೀಡಾ ಇಲಾಖೆ ತಾಲೂಕಾಧಿಕಾರಿ ಸಂಜೀವಕುಮಾರ ನಾಯಿಕ, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಮಾಹಾವೀರ ಜೀರಗ್ಯಾಳ, ಬಿ.ಆರಿ್ಸ ಬಸವರಾಜ ಕಾಂಬಳೆ, ಎಲ್.ಬಿ.ಬನಶಂಕರಿ , ಜೆಡ್.ಆರ್ ಮುಲ್ಲಾ, ರಾಜು ಅರಬಳ್ಳಿ, ವ್ಹಿ.ಡಿ.ಉಪಾಧ್ಯೆ ಹಾಗೂ ದೈಹಿಕ ಶಿಕ್ಷಕರು ಮತ್ತು ಕ್ರೀಡಾ ಪಟುಗಳು ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 