ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಅಗತ್ಯ: ಅಶೋಕ ಅಂಗಡಿ
Sportspersons need encouragement: Ashoka Angadi
ರಾಯಬಾಗ, 26 ; ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದರ ಮೂಲಕ ಕ್ರೀಡಾಕೂಟಗಳನ್ನು ಬೆಳೆಸಬೇಕೆಂದು ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ರಾಯಬಾಗ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕ್ರೀಡಾ ಪಟುಗಳು ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಯಗಳಿಸಿ, ತಾಲೂಕಿನ ಕೀರ್ತಿಯನ್ನು ಹೆಚ್ಚಿಸಬೇಕೆಂದರು.
ರಾಯಬಾಗ ಗ್ರಾಮೀಣ ಗ್ರಾ.ಪಂ.ಅಧ್ಯಕ್ಷೆ ಮಹಾದೇವಿ ದೀಪಾಳೆ, ಉಪಾಧ್ಯಕ್ಷೆ ಬೇಗಂ ಶಿಂಗೆ, ಪ.ಪಂ.ಸದಸ್ಯ ಸುರೇಶ ಮಾಳಿ, ಕ್ರೀಡಾ ಇಲಾಖೆ ತಾಲೂಕಾಧಿಕಾರಿ ಸಂಜೀವಕುಮಾರ ನಾಯಿಕ, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಮಾಹಾವೀರ ಜೀರಗ್ಯಾಳ, ಬಿ.ಆರಿ್ಸ ಬಸವರಾಜ ಕಾಂಬಳೆ, ಎಲ್.ಬಿ.ಬನಶಂಕರಿ , ಜೆಡ್.ಆರ್ ಮುಲ್ಲಾ, ರಾಜು ಅರಬಳ್ಳಿ, ವ್ಹಿ.ಡಿ.ಉಪಾಧ್ಯೆ ಹಾಗೂ ದೈಹಿಕ ಶಿಕ್ಷಕರು ಮತ್ತು ಕ್ರೀಡಾ ಪಟುಗಳು ಇದ್ದರು
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 