ರಾಷ್ಟ್ರ ಮಟ್ಟದ ನೆಟ್ ಬಾಲ್ ತಂಡಕ್ಕೆ ಸ್ಪೂರ್ತಿ ಆಯ್ಕೆ
Spurti selected for national level netball team
ಮಹಾಲಿಂಗಪುರ 20: ಮುಧೋಳ ತಾಲೂಕಿನ ರನ್ನ ಬೆಳಗಲಿ ಪಟ್ಟಣದ ಕುಮಾರಿ ಸ್ಪೂರ್ತಿ ನಾರಾಯಣ ಲಾಲಿಬುಡ್ಡಿ ಬಾಗಲಕೋಟ ಜಿಲ್ಲೆಯ ನೆಟ್ ಬಾಲ್ ತಂಡವನ್ನು ಪ್ರತಿನಿಧಿಸಿ, ತನ್ನ ವೈಯಕ್ತಿಕ ಉತ್ತಮ ಆಟದಿಂದ ರಾಜ್ಯ ಆಯ್ಕೆದಾರರ ಗಮನ ಸೆಳೆದು ರಾಷ್ಟ್ರ ಮಟ್ಟದ ನೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿ ಶಾಲೆಯ ಮತ್ತು ಪಟ್ಟಣದ ಕೀರ್ತಿ ಹೆಚ್ಚಿಸಿದ್ದಾಳೆ.
ಇತ್ತಿಚೆಗೆ ಕೋಲ್ಲೂರದ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಗಳು ನಡೆದು, ಮುಂದಿನ ರಾಷ್ಟ್ರ ಮಟ್ಟದ ಕ್ರೀಡಾಕೂಟ ಇದೇ ತಿಂಗಳು ಡಿಸೆಂಬರ್ 25 ರಿಂದ 28 ರವರೆಗೆ ಛತ್ತಿಸಘಡ ರಾಜ್ಯದ ಕೊರ್ಬಾದಲ್ಲಿ ನಡೆಯಲಿವೆ. ಈ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆಗೈದ ವಿಧ್ಯಾರ್ಥಿನಿ ಸ್ಪೂರ್ತಿ ಶ್ರೀ ಗುರು ಮಹಾಲಿಂಗೇಶ್ವರ ವಿದ್ಯಾವರ್ಧಕ ಸಂಘದ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಈ ಸಂದರ್ಭದಲ್ಲಿ ಬೆಳಗಲಿ ವಿದ್ಯಾವರ್ಧಕ ಸಂಘ ಶ್ರೀ ಗುರು ಮಹಾಲಿಂಗೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಅಧ್ಯಕ್ಷ ದುಂಡಪ್ಪ ಬರಮನಿ, ಉಪಾಧ್ಯಕ್ಷ ಚಿಕ್ಕಯ್ಯ ನಾಯಕ, ಕಾರ್ಯಧ್ಯಕ್ಷ ಪಿ ಬಿ ಪೂಜಾರ, ಕಾರ್ಯದರ್ಶಿ ಎಸ್ ಐ. ಒಂಟಗೋಡಿ, ಪ್ರಾಚಾರ್ಯ ಪಿ ಎಚ್ ನಾಯಕ, ದೈಹಿಕ ಶಿಕ್ಷಕ ರಾಘವೇಂದ್ರ ನಾಯಕ್, ವ್ಯವಸ್ಥಾಪಕರಾದ ಕುಮಾರಿ ಉಮಾಶ್ರೀ ನ್ಯಾಮಗೌಡ ಮತ್ತು ಸರ್ವ ಸದಸ್ಯರು ಉಪನ್ಯಾಸಕರು, ಶಾಲೆಯ ವಿದ್ಯಾರ್ಥಿಗಳು ಹಾಗೂ ಊರಿನ ಗುರುಹಿರಿಯರು ಈ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 