ಶ್ರೀ ಬಲಭೀಮ ದೇವಸ್ಥಾನದ ಜಾತ್ರಮಹೋತ್ಸವ
Sri Balabhima Temple Fair
ಗೋಕಾಕ, 19 : ನಗರದ ಉಪ್ಪಾರ ಓಣಿಯ ಶ್ರೀ ಬಲಭೀಮ(ಮಾರುತಿ) ದೇವಸ್ಥಾನದ ಜಾತ್ರಾ ಮಹೋತ್ಸವ ಕಾರ್ಯಕ್ರಮವು ದಿ.20ರಿಂದ 24ರವರೆಗೆ 5 ದಿನಗಳ ಕಾಲ ಅತೀ ವಿಜೃಂಭನೆಯಿಂದ ಜರುಗಲಿದೆ.
ದಿ.20ರಂದು ಬೆಳಿಗ್ಗೆ ಶ್ರೀಬಲಭೀಮ ದೇವರಿಗೆ ಹಾಲಿನ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 7 ಗಂಟೆಗೆ ಸತ್ಸಂಗ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಮಹಾಪ್ರಸಾದ ಸಂಜೆ 6 ಗಂಟೆಗೆ 8 ಗಂಟೆಯವರೆಗೆ ಪೂಜ್ಯ ಶ್ರೀ ಮಾರುತಿ ಶರಣರು ಇವರಿಂದ ಶ್ರೀ ಹನುಮಂತದೇವರ ಕಥಾ ಎಂಬ ಪ್ರವಚನ ಜರುಗುವುದು. ರಾತ್ರಿ 8 ಗಂಟೆಗೆ ಮಹಾಪ್ರಸಾದ ಜರುಗಲಿದೆ.
ದಿ.21ರಂದು ಬೆಳಿಗ್ಗೆ ಶ್ರೀಬಲಭೀಮ ದೇವರಿಗೆ ಮೊಸರಿನ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 7 ಗಂಟೆಗೆ ಸತ್ಸಂಗ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಮಹಾಪ್ರಸಾದ ಸಂಜೆ 6 ಗಂಟೆಗೆ 8 ಗಂಟೆಯವರೆಗೆ ಪೂಜ್ಯ ಶ್ರೀ ಮಾರುತಿ ಶರಣರು ಇವರಿಂದ ಶ್ರೀ ಹನುಮಂತದೇವರ ಕಥಾ ಎಂಬ ಪ್ರವಚನ ಜರುಗುವುದು. ರಾತ್ರಿ 8 ಗಂಟೆಗೆ ಮಹಾಪ್ರಸಾದ ಜರುಗಲಿದೆ.
ದಿ.22ರಂದು ಬೆಳಿಗ್ಗೆ ಶ್ರೀಬಲಭೀಮ ದೇವರಿಗೆ ತುಪ್ಪದ ಅಭಿಷೇಕ ಹಾಗೂ ಶ್ರೀ ಅನಂತಸುಬ್ರಮಣ್ಯ ಜೋಶಿ ಪುರೋಹಿತರಿಂದ ಸುದರ್ಶನ ಹೋಮ ಜರುಗಲಿದೆ. ಮುಂಜಾನೆ 7 ಗಂಟೆಗೆ ಸತ್ಸಂಗ ಕಾರ್ಯಕ್ರಮ ಹಾಗೂ ನಗರದ ಸುತ್ತಮುತ್ತಲಿನ ದೇವಸ್ಥಾನಗಳ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವುದು. ಮಧ್ಯಾಹ್ನ ಮಹಾಪ್ರಸಾದ ಸಂಜೆ 6 ಗಂಟೆಗೆ 8 ಗಂಟೆಯವರೆಗೆ ಪೂಜ್ಯ ಶ್ರೀ ಮಾರುತಿ ಶರಣರು ಇವರಿಂದ ಶ್ರೀ ಹನುಮಂತದೇವರ ಕಥಾ ಎಂಬ ಪ್ರವಚನ ಜರುಗುವುದು. ರಾತ್ರಿ 8 ಗಂಟೆಗೆ ಮಹಾಪ್ರಸಾದ ಜರುಗಲಿದೆ.
ದಿ.23ರಂದು ಬೆಳಿಗ್ಗೆ ಶ್ರೀಬಲಭೀಮ ದೇವರಿಗೆ ಜೇನುತುಪ್ಪ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 8 ಗಂಟೆಗೆ ಶ್ರೀ ಬಲಭೀಮ ದೇವರ ಪಲ್ಲಕ್ಕಿ ಉತ್ಸವವು ಪ್ರಮುಖ ಬೀದಿಗಳ ಮೂಲಕ ವಾದ್ಯಮೇಳದೊಂದಿಗೆ ಮೆರವಣಿಗೆ ಜರುಗುವುದು. ಹಾಗೂ ಮಧ್ಯಾಹ್ನ ಮಹಾಪ್ರಸಾದ ಸಂಜೆ 6 ಗಂಟೆಗೆ 8 ಗಂಟೆಯವರೆಗೆ ಪೂಜ್ಯ ಶ್ರೀ ಮಾರುತಿ ಶರಣರು ಇವರಿಂದ ಶ್ರೀ ಹನುಮಂತದೇವರ ಕಥಾ ಎಂಬ ಪ್ರವಚನ ಜರುಗುವುದು. ರಾತ್ರಿ 8 ಗಂಟೆಗೆ ಮಹಾಪ್ರಸಾದ ಜರುಗಲಿದೆ.
ದಿ.24ರಂದು ಬೆಳಿಗ್ಗೆ ಶ್ರೀಬಲಭೀಮ ದೇವರಿಗೆ ಹಣ್ಣು ಮತ್ತ ಸಕ್ಕರೆ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 7 ಗಂಟೆಗೆ ಸತ್ಸಂಗ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಮಹಾಪ್ರಸಾದ ಸಂಜೆ 6 ಗಂಟೆಗೆ 8 ಗಂಟೆಯವರೆಗೆ ಪೂಜ್ಯ ಶ್ರೀ ವಿಶ್ವಾಧಿರಾಜತೀರ್ಥ ಮಹಾಸ್ವಾಮಿಗಳು ಇವರಿಂದ ಪ್ರವಚನ ಜರುಗುವುದು. ರಾತ್ರಿ 8 ಗಂಟೆಗೆ ಮಹಾಪ್ರಸಾದ ಜರುಗಲಿದೆ ಎಂದು ಜಾತ್ರಾ ಕಮೀಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 