ಅಮ್ಮಿನಬಾವಿಯಲ್ಲಿ ಶ್ರೀಹನುಮ ಜಯಂತಿ
Sri Hanuman Jayanti at Amminabavi
ಲೋಕದರ್ಶನ ವರದಿ
ಧಾರವಾಡ 31 : ತಾಲೂಕಿನ ಅಮ್ಮಿನಬಾವಿ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಹಳೆಯ ಶ್ರೀವೀರಾಂಜನೇಯ ದೇವಸ್ಥಾನದಲ್ಲಿ ದವನದ ಹುಣ್ಣಿಮೆಯ ದಿನ ಗುರುವಾರ(ಏ.2) ಶ್ರೀಹನುಮ ಜಯಂತಿ ಮಹೋತ್ಸವ ಜರುಗಲಿದೆ. ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನ, ಓಂಕಾರ ಸೇವಾ ಸಂಘ ಹಾಗೂ ಶ್ರೀಮಾರುತಿ ಅಭಿವೃದ್ಧಿ ಸೇವಾ ಸಂಘ ಹಾಗೂ ಅಮ್ಮಿನಬಾವಿಯ ವಿವಿಧ ಯುವಕ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯುವ 2026ನೆಯ ವರ್ಷದ ಶ್ರೀಹನುಮ ಜಯಂತಿ ಮಹೋತ್ಸವದ ಅಂಗವಾಗಿ ಏ.1 ರಂದು (ಬುಧವಾರ) ಪ್ರಾತಃಕಾಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜರುಗಲಿದೆ.
ವಿಶೇಷ ಮೆರವಣಿಗೆ : ಹುಣ್ಣಿಮೆಯ ದಿನ ಪ್ರಾತಃಕಾಲದಲ್ಲಿ ಶ್ರೀವೀರಾಂಜನೇಯ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಗೆ ಶ್ರೀವೀರಾಂಜನೇಯನ ತೊಟ್ಟಿಲೋತ್ಸವ ಜರುಗಲಿದೆ. ಗುರುವಾರ ಬೆಳಿಗ್ಗೆ 8 ಗಂಟೆಗೆ ಹಲವಾರು ವಾದ್ಯಮೇಳಗಳು ವಿವಿಧ ಕಲಾ ತಡಗಳು, ಮಹಿಳೆಯರ ಪೂರ್ಣಕುಂಭಗಳು, ಕೇಸರಿ ಧ್ವಜ ಸಮೇತ ಶ್ರೀವೀರಾಂಜನೇಯಸ್ವಾಮಿ ಭಾವಚಿತ್ರದ ವಿಶೇಷ ಮೆರವಣಿಗೆಯನ್ನು ಗ್ರಾಮದಲ್ಲಿ ಸಂಘಟಿಸಲಾಗಿದೆ. ಮೆರವಣಿಗೆಯ ನಂತರ ದಾಸೋಹ ಸೇವೆಯಲ್ಲಿ ಸಾಮೂಹಿಕ ಅನ್ನಸಂತರೆ್ಣ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 