ಶ್ರೀ ಹುಲಿಕುಂಟರಾಯ ತೊಗಲುಗೊಂಬೆ ಕಲಾ ತಂಡ: ಕೆ. ಹೊನ್ನೂರ ಸ್ವಾಮಿ
Sri Hulikuntaraya Puppet Art Team: K. Honnura Swami
ಲೋಕದರ್ಶನ ವರದಿ
ಬಳ್ಳಾರಿ 29: ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ಗುಗ್ಗರಟ್ಟಿಯ ಈಶ್ವರ ದೇವಸ್ಥಾನ ಆವರಣದಲ್ಲಿ "ಬಸವ ಸಾಂಸ್ಕೃತಿಕ ಸಂಜೆ" ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗುಗ್ಗರಟ್ಟಿಯ ಹಿರಿಯ ಮುಖಂಡರಾದ ಕೆ. ಹೊನ್ನೂರ ಸ್ವಾಮಿ ರವರು ಶ್ರೀ ಹುಲಿಕುಂಟರಾಯ ತೊಗಲುಗೊಂಬೆ ಕಲಾತಂಡವು ಜನಪದ ಕಲೆಗಳಲ್ಲೊಂದಾದ ತೊಗಲಗೊಂಬೆ ಕಲೆಯ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದೆ. ಜಾನಪದ ಕಲೆ ಉಳಿಯಬೇಕಾದರೆ ಈ ತರಹದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕೆಂದು ಅಭಿಪ್ರಾಯಪಟ್ಟರು ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾವುದೇ ಕಾರ್ಯಕ್ರಮಗಳು ನಮ್ಮ ಗುಗ್ಗರಟ್ಟಿಯಲ್ಲಿ ನಡೆಯಲು ನಾವು ಯಾವತ್ತಿಗೂ ಕೂಡ ಸಹಕಾರ ನೀಡುತ್ತೇವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಬಿ ನಾಗರಾಜರವರು ಕಲೆ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲಾ ತಂಡಗಳಿಗೆ ಸಹಾಯವನ್ನು ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಕೆ.ರಾಜಶೇಖರ ಗೌಡ್ರು ಇವತ್ತಿನ ಟಿವಿ ಮತ್ತು ಮೊಬೈಲ್ಗಳ ಹಾವಳಿಗಳಿಂದ ನಮ್ಮ ಹಳ್ಳಿಯ ಸೊಗಡಿನ ಸಂಸ್ಕೃತಿಯು ಮರೆಯಾಗುತ್ತಿದೆ ಹಾಗಾಗಿ ಈ ತರಹದ ಕಾರ್ಯಕ್ರಮಗಳು ನಡೆಯುವುದರಿಂದ ನಮ್ಮ ನಾಡಿನ ಕಲಾ ಶ್ರೀಮಂತಿಕೆಯನ್ನು ಪೋಷಿಸಿ ಬೆಳೆಸಬಹುದು ಎಂದರು, ವೇದಿಕೆ ಮೇಲೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜಿಲಾನಿ ಭಾಷಾ ರವರು ಆಲಾಪ ಸಂಗೀತ ಕಲಾ ಟ್ರಸ್ಟ್ನ ಅಧ್ಯಕ್ಷರಾದ ರಮಣಪ್ಪ ಭಜಂತ್ರಿ ರವರು ಇನ್ನು ಮುಂತಾದವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಶ್ರೀ ಹುಲಿಕುಂಟರಾಯ ತೊಗಲುಗೊಂಬೆ ಕಲಾ ತಂಡದ ಅಧ್ಯಕ್ಷರಾದ ಕೆ. ಹೊನ್ನೂರಸ್ವಾಮಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಗುಗ್ಗರಟ್ಟಿಯ ಸಮಾಜ ಸೇವಕರಾದ ಪುರುಷೋತ್ತಮ್ ರವರು ಸ್ವಾಗತಿಸಿದರು ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮಿದೇವಿ ವಂದಿಸಿದರು. ನಂತರ ಕು. ರಾಜೇಶ್ ಮತ್ತು ತಂಡ ಕಂಪ್ಲಿ ರವರಿಂದ ಜಾನಪದ ನೃತ್ಯ, ಶ್ರೀ ತಾಯಪ್ಪ ಎಮ್ಮಿಗನೂರು ಮತ್ತು ತಂಡದವರಿಂದ ಸುಗಮ ಸಂಗೀತ, ಶ್ರೀಮತಿ ಗಂಗಮ್ಮ ಮತ್ತು ತಂಡ ಲಕ್ಷ್ಮಿನಗರ ಕ್ಯಾಂಪ್ ಇವರಿಂದ ಬಸವ ಬೆಳೆ ತೊಗಲುಗೊಂಬೆ ಪ್ರದರ್ಶನ, ಶ್ರೀ ಡಿ. ವಿರೂಪಾಕ್ಷಪ್ಪ ಮತ್ತು ತಂಡದವರಿಂದ ಬಯಲಾಟ ಪ್ರದರ್ಶನ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾದಿಕಾರಿಗಳು ಹಾಗೂ ಹೆಚ್ಚಿನ ಜನಸಂಖ್ಯೆ ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 