ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
Sri Krishna Janmashtami at J.S.S. Sri Manjunatheshwara Central School
ಧಾರವಾಡ, 16 ; ದಿ. 16ರಂದು ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಭಾವ ದೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳು ಶ್ರೀಕೃಷ್ಣನ ಜೀವನ ಕುರಿತ ಕಂಸ ವದೆ, ಗೋವರ್ಧನ ಗಿರಿಧಾರಿ, ಕೃಷ್ಣನ ಜನ್ಮ, ಪೂತನಿ ಸಂಹಾರ, ಕೃಷ್ಣ ಸುಧಾಮ ಹೀಗೆ ಹಲವು ಪ್ರಸಂಗಗಳನ್ನು ಚದ್ಮವೇಷಗಳ ಮುಖಾಂತರ ಪ್ರಸ್ತುತಪಡಿಸಿದರು. 500 ಕ್ಕೂ ಹೆಚ್ಚು ಮಕ್ಕಳು ರಾಧೆ ಹಾಗೂ ಕೃಷ್ಣನ ವೇಷ ಧರಿಸಿ ಕಾರ್ಯಕ್ರಮಕ್ಕೆ ಖಳೆ ತಂದುಕೊಟ್ಟರು.
5 ನೂರಕ್ಕೂ ಹೆಚ್ಚು ಮಕ್ಕಳು ತಮ್ಮ ನೃತ್ಯದ ಮುಖಾಂತರ ಶ್ರೀಕೃಷ್ಣನಿಗೆ ತಮ್ಮ ಭಕ್ತಿಯನ್ನು ಸಮರ್ಿಸಿದರು. ಶ್ರೀ ಕೃಷ್ಣನ ಪಾಲಕಿ ಸೇವೆ ಎಲ್ಲರಲ್ಲಿ ಭಕ್ತಿಭಾವವನ್ನು ಮೂಡಿಸಿತು. ಪಾಲಕಿಯೊಂದಿಗೆ ಸಾಗಿದ ಮಕ್ಕಳ ಹಾಗೂ ಶಿಕ್ಷಕರ ಹರೇ ಕೃಷ್ಣ ಹರೇ ರಾಮ ರಾಮ ರಾಮ ಹರೇ ಹರೇ ಹರೇ ರಾಮ ಹರೇ ರಾಮ ಹರೇ ಕೃಷ್ಣ ಹರೇ ಹರೇ ನಾಮಸ್ಮರಣೆಯು ಶಾಲಾ ಆವರಣವನ್ನು ಭಕ್ತಿಮಯವಾಗಿಸಿತು. 21 ತರಹದ ವಿವಿಧ ರೀತಿಯ ಆರತಿಗಳು ಕಾರ್ಯಕ್ರಮಕ್ಕೆ ಮೆರೆದು ನೀಡಿದವು.
ಸಾಂಪ್ರದಾಯಿಕವಾಗಿ ಪೂಜೆಯನ್ನು ನೆರವೇರಿಸಿದ ಶಾಲಾ ಪ್ರಾಚಾರ್ಯ ಶ್ರೀಮತಿ ಸಾಧನಾ. ಎಸ್ ಕಾರ್ಯಕ್ರಮ ಕುರಿತು ಸಂತಸ ವ್ಯಕ್ತಪಡಿಸಿ ಶ್ರೀ ಕೃಷ್ಣನ ಅನುಗ್ರಹ, ಆಶೀರ್ವಾದ ಎಲ್ಲರಿಗೂ ದೊರೆಯಲಿ ಎಂದರು. ಶಾಲಾ ಆವರಣ ಕೃಷ್ಣ ಭಕ್ತಿಯಲ್ಲಿ ಮಿಂದೆದ್ದಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 