ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
Sri Krishna Janmashtami at J.S.S. Sri Manjunatheshwara Central School
ಧಾರವಾಡ, 16 ; ದಿ. 16ರಂದು ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಭಾವ ದೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳು ಶ್ರೀಕೃಷ್ಣನ ಜೀವನ ಕುರಿತ ಕಂಸ ವದೆ, ಗೋವರ್ಧನ ಗಿರಿಧಾರಿ, ಕೃಷ್ಣನ ಜನ್ಮ, ಪೂತನಿ ಸಂಹಾರ, ಕೃಷ್ಣ ಸುಧಾಮ ಹೀಗೆ ಹಲವು ಪ್ರಸಂಗಗಳನ್ನು ಚದ್ಮವೇಷಗಳ ಮುಖಾಂತರ ಪ್ರಸ್ತುತಪಡಿಸಿದರು. 500 ಕ್ಕೂ ಹೆಚ್ಚು ಮಕ್ಕಳು ರಾಧೆ ಹಾಗೂ ಕೃಷ್ಣನ ವೇಷ ಧರಿಸಿ ಕಾರ್ಯಕ್ರಮಕ್ಕೆ ಖಳೆ ತಂದುಕೊಟ್ಟರು.
5 ನೂರಕ್ಕೂ ಹೆಚ್ಚು ಮಕ್ಕಳು ತಮ್ಮ ನೃತ್ಯದ ಮುಖಾಂತರ ಶ್ರೀಕೃಷ್ಣನಿಗೆ ತಮ್ಮ ಭಕ್ತಿಯನ್ನು ಸಮರ್ಿಸಿದರು. ಶ್ರೀ ಕೃಷ್ಣನ ಪಾಲಕಿ ಸೇವೆ ಎಲ್ಲರಲ್ಲಿ ಭಕ್ತಿಭಾವವನ್ನು ಮೂಡಿಸಿತು. ಪಾಲಕಿಯೊಂದಿಗೆ ಸಾಗಿದ ಮಕ್ಕಳ ಹಾಗೂ ಶಿಕ್ಷಕರ ಹರೇ ಕೃಷ್ಣ ಹರೇ ರಾಮ ರಾಮ ರಾಮ ಹರೇ ಹರೇ ಹರೇ ರಾಮ ಹರೇ ರಾಮ ಹರೇ ಕೃಷ್ಣ ಹರೇ ಹರೇ ನಾಮಸ್ಮರಣೆಯು ಶಾಲಾ ಆವರಣವನ್ನು ಭಕ್ತಿಮಯವಾಗಿಸಿತು. 21 ತರಹದ ವಿವಿಧ ರೀತಿಯ ಆರತಿಗಳು ಕಾರ್ಯಕ್ರಮಕ್ಕೆ ಮೆರೆದು ನೀಡಿದವು.
ಸಾಂಪ್ರದಾಯಿಕವಾಗಿ ಪೂಜೆಯನ್ನು ನೆರವೇರಿಸಿದ ಶಾಲಾ ಪ್ರಾಚಾರ್ಯ ಶ್ರೀಮತಿ ಸಾಧನಾ. ಎಸ್ ಕಾರ್ಯಕ್ರಮ ಕುರಿತು ಸಂತಸ ವ್ಯಕ್ತಪಡಿಸಿ ಶ್ರೀ ಕೃಷ್ಣನ ಅನುಗ್ರಹ, ಆಶೀರ್ವಾದ ಎಲ್ಲರಿಗೂ ದೊರೆಯಲಿ ಎಂದರು. ಶಾಲಾ ಆವರಣ ಕೃಷ್ಣ ಭಕ್ತಿಯಲ್ಲಿ ಮಿಂದೆದ್ದಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 