ಸ್ವಾಮಿ ವಿವೇಕಾನಂದರ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
Sri Krishna Janmashtami at Swami Vivekananda School
ಇಂಡಿ 20: ತಾಲ್ಲೂಕಿನ ಹೋರ್ತಿ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಆವರಣದಲ್ಲಿ ಪುಟ ಮಕ್ಕಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ನಂತರ ಮಾತನಾಡಿದ ಶಾಲೆಯ ಉಪಾಧ್ಯಕ್ಷ ಐ ಖ ಕಲಶೆಟ್ಟಿ ಅವರು ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಜನ್ಮಾಷ್ಟಮಿ ಹಬ್ಬವನ್ನು ಬಹಳ ವೈಭವದಿಂದ ಆಚರಿಸಲಾಗುತ್ತದೆ. ಈ ದಿನದಂದು ಭಕ್ತರು ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ಆತನ ಆಶೀರ್ವಾದವನ್ನು ಪಡೆಯಲು ಉಪವಾಸವನ್ನು ಕೂಡ ಮಾಡುತ್ತಾರೆ. ಜನ್ಮಾಷ್ಟಮಿಯನ್ನು ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಮತ್ತು ಸಂತೋಷವನ್ನು ತರುವ ಸಂಕೇತವೆಂದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಗುರುಮಾತೆ ಎ ಒ ಬಿರಾದಾರ ಅವರು ನಮ್ಮ ಶ್ರೀಕೃಷ್ಣ ಜನ್ಮಾಷ್ಟಮಿ ಬಗ್ಗೆ ಕಥೆ ಹಾಗೂ ನಾಟಕ ಹೇಳಿ ಮಕ್ಕಳಿಗೆ ತಿಳುವಳಿಕೆ ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಆ ಒ ಹಿರೇಮಠ, ಎ ಖ ಕಂದಗಲ್, ಖ ಃ ಮಸೂತಿ, ಂ ಖ ಕಂಬಾರ, ಂ ಖಿ ದೇವಕರ ಹಾಗೂ ಪಾಲಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 