ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡ ಶ್ರೀಲಂಕಾ ಪ್ರಧಾನಿ ರಾಜಪಕ್ಸ
ತಿರುಮಲ, ಫೆ 11 ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸ ಮಂಗಳವಾರ ಬೆಳಗ್ಗೆ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದುಕೊಂಡರು.ತಿರುಪತಿ ತಿಮ್ಮಪ್ಪನ ಪರಮ ಭಕ್ತರಾಗಿರುವ ರಾಜಪಕ್ಸ, ಸಂಪ್ರದಾಯಿಕ ವಸ್ತ್ರ ಧರಿಸಿ, ಪುತ್ರ ಯೋಷಿತ್ ರಾಜಪಕ್ಸ, ಸಂಪುಟ ಸಚಿವ ಆರ್ಮುಗಂ ತೊಂಡಮಾನ್ ಅವರೊಂದಿಗೆ ಮಂಗಳವಾರ ಬೆಳಗ್ಗೆ ಅಷ್ಟದಳ ಪಾದ ಪದ್ಮರಾಧನಾ ಸಂದರ್ಭದಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡರು.ಇದಕ್ಕೂ ಮುನ್ನ, ಮಹಿಂದ ರಾಜಪಕ್ಸ ತಿಮ್ಮಪ್ಪನ ದೇಗಲ ಬಳಿ ಆಗಮಿಸಿದಾಗ, ಆಂಧ್ರ ಪ್ರದೇಶ ಸರ್ಕಾರ ಸಚಿವ ಪಿ. ರಾಮಚಂದ್ರ ರೆಡ್ಡಿ, ಟಿಟಿಡಿ ಕಾರ್ಯಕಾರಿ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಹಾಗೂ ಹೆಚ್ಚುವರಿ ಕಾರ್ಯಕಾರಿ ಅಧಿಕಾರಿ ಎ.ವಿ. ಧರ್ಮಾ ರೆಡ್ಡಿ ಸ್ವಾಗತ ಕೋರಿದರು. ದೇವರ ದರ್ಶನ ಪಡೆದುಕೊಂಡ ನಂತರ ರಾಜಪಕ್ಸೆ ಅವರಿಗೆ ರಂಗನಾಯಕುಲ ಮಂಟಪ ನಲ್ಲಿ ವೇದ ಪಂಡಿತರು ವೇದ ಆರ್ಶಿವಚನ ನಡೆಸಿ, ತೀರ್ಥ, ಪ್ರಸಾದ ವಿತರಿಸಿದರು.ಶ್ರೀ ಲಂಕಾ ಪ್ರಧಾನಿ ಭೇಟಿಯ ಹಿನ್ನಲೆಯಲ್ಲಿ ತಿರುಪತಿ ತಿರುಮಲದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 