ದಿ. 11ರಂದು ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ
Sri Mallikarjuna Devara Jatra Mahotsav on the 11th
ಬ್ಯಾಡಗಿ 06: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕ ಆಣೂರ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಹಾಗೂ ಸರ್ವ ಶರಣರ ಸಮ್ಮೇಳನ ಜರುಗುವುದು. ದಿ. 11ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಪುಷ್ಪ ರಥೋತ್ಸವ ಬಹು ವಿಜೃಂಭಣೆಯಿಂದ ಜರುಗುವುದು. 12ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಮಹಾ ರಥೋತ್ಸವ ಡೊಳ್ಳು ಬಾಜಾ ಭಜಂತ್ರಿ ಸಕಲ ವಾದ್ಯವೈಭವಗಳೊಂದಿಗೆ ಅತೀ ವಿಜೃಂಭಣೆಯಿಂದ ಜರುಗುವುದು.
ಅದೇ ದಿವಸ ಗುರುವಾರ ಮುಂಜಾನೆ 11-00 ಗಂಟೆಗೆ ಸ್ಥಳ: ಶ್ರೀ ಮಲ್ಲಿಕಾರ್ಜುನ ರಂಗಮಂದಿರ, ಆಣೂರ ಶ್ರೀಮುದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ತರಳುಬಾಳು ಜಗದ್ಗುರು ಶ್ರೀ 1108 ಶ್ರೀ ಡಾ: ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಬೃಹನದಮಠ, ಸಿರಿಗೆರೆ. ಹಾಗೂ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಟ್ಟಾಧ್ಯಕ್ಷರು, ಶ್ರೀ ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ. ಸ್ವಾಮಿಜಿಗಳಿಂದ ಆಸೀರವಚನ ಕಾರ್ಯಕ್ರಮ ಜರಗುವುದು ಎಂದು ಗ್ರಾಮದ ಸದಭಕ್ತರಾದ ಮೃತುಂಜಯ್ಯ ಕೊಪ್ಪದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 