ದಿ. 11ರಂದು ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ
Sri Mallikarjuna Devara Jatra Mahotsav on the 11th
ಬ್ಯಾಡಗಿ 06: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕ ಆಣೂರ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಹಾಗೂ ಸರ್ವ ಶರಣರ ಸಮ್ಮೇಳನ ಜರುಗುವುದು. ದಿ. 11ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಪುಷ್ಪ ರಥೋತ್ಸವ ಬಹು ವಿಜೃಂಭಣೆಯಿಂದ ಜರುಗುವುದು. 12ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಮಹಾ ರಥೋತ್ಸವ ಡೊಳ್ಳು ಬಾಜಾ ಭಜಂತ್ರಿ ಸಕಲ ವಾದ್ಯವೈಭವಗಳೊಂದಿಗೆ ಅತೀ ವಿಜೃಂಭಣೆಯಿಂದ ಜರುಗುವುದು.
ಅದೇ ದಿವಸ ಗುರುವಾರ ಮುಂಜಾನೆ 11-00 ಗಂಟೆಗೆ ಸ್ಥಳ: ಶ್ರೀ ಮಲ್ಲಿಕಾರ್ಜುನ ರಂಗಮಂದಿರ, ಆಣೂರ ಶ್ರೀಮುದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ತರಳುಬಾಳು ಜಗದ್ಗುರು ಶ್ರೀ 1108 ಶ್ರೀ ಡಾ: ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಬೃಹನದಮಠ, ಸಿರಿಗೆರೆ. ಹಾಗೂ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಟ್ಟಾಧ್ಯಕ್ಷರು, ಶ್ರೀ ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ. ಸ್ವಾಮಿಜಿಗಳಿಂದ ಆಸೀರವಚನ ಕಾರ್ಯಕ್ರಮ ಜರಗುವುದು ಎಂದು ಗ್ರಾಮದ ಸದಭಕ್ತರಾದ ಮೃತುಂಜಯ್ಯ ಕೊಪ್ಪದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 