ದಿ.23ರಂದು ಶ್ರೀ ಮೈಲಾರಲಿಂಗ ಜಾತ್ರಾ ಮಹೋತ್ಸವ
Sri Mylaralinga Jatra Mahotsava on 23rd
ಧಾರವಾಡ 20: ಸುಮಾರು 8ನೇ ಶತಮಾನದ ಪೂಜ್ಯ ಜಕಣಾಚಾರಿಗಳು ಧಾರವಾಡದ ವಿದ್ಯಾಗಿರಿಯಲ್ಲಿ ನಿರ್ಮಿಸಿದ ಶ್ರೀ ಮೈಲಾರಲಿಂಗ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮೈಲಾರಲಿಂಗ ದೇವಸ್ಥಾನದ ಜಾತ್ರೆ ಹಾಗೂ ಕಾರ್ಣಿಕೋತ್ಸವವು ರವಿವಾರ ದಿ.23ರಂದು ಜರಗುವುದು ಮತ್ತು ಶನಿವಾರ ದಿ. 22 ರಂದು ಮಹಾಭಿಷೇಕ ಬಿಲ್ಲು ಪೂಜೆ, ಹಾಗೂ ರಾತ್ರಿ, ಭಜನೆ ಜಾಗರಣೆ ನಡೆಯುವದು.
ಇದು 59ನೇ ಕಾರ್ಣಿಕೋತ್ಸವ ಆಗಿದ್ದು, ಶ್ರೀ ಮೈಲಾರಲಿಂಗ ದೇವಸ್ಥಾನದ ವಂಶ ಪಾರಂಪರಿಕ ಕಾರ್ಣಿಕ ಪುರುಷ ಶ್ರೀ ಸಿರಿಮಲ್ಲ ತಿಪ್ಪಣ್ಣ ಶಿರೋಳ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರಗುವುದು. ದಿ.23ರಂದು ರವಿವಾರ ಮಧ್ಯಾಹ್ನ 12 ಗಂಟೆಗೆ ಡೋಣಿ ಪೂಜೆ (ತುಂಬಿಸುವುದು), ಅನ್ನ ಸಂತರೆ್ಣ, ಸಂಜೆ 4:30 ಕ್ಕೆ ಮಹಾಮಂಗಳಾರತಿ ನಂತರ ಪಲ್ಲಕ್ಕಿ ಉತ್ಸವ ಕಾರ್ಣಿಕ ಸೇವೆ, ಸರಪಳಿ ಸೇವೆ ಜರಗುವವು, ಕಾರಣ ಸಕಲ ಸದ್ಭಕ್ತರು ತನುಮನದಿಂದ ಸೇವೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಜಾತ್ರೆ ಹಾಗೂ ಅನ್ನ ಪ್ರಸಾದದ ವ್ಯವಸ್ಥಾಪಕರಾದ ಮಂಜುನಾಥ ಎಂ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 