ದಿ.23ರಂದು ಶ್ರೀ ಮೈಲಾರಲಿಂಗ ಜಾತ್ರಾ ಮಹೋತ್ಸವ
Sri Mylaralinga Jatra Mahotsava on 23rd
ಧಾರವಾಡ 20: ಸುಮಾರು 8ನೇ ಶತಮಾನದ ಪೂಜ್ಯ ಜಕಣಾಚಾರಿಗಳು ಧಾರವಾಡದ ವಿದ್ಯಾಗಿರಿಯಲ್ಲಿ ನಿರ್ಮಿಸಿದ ಶ್ರೀ ಮೈಲಾರಲಿಂಗ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮೈಲಾರಲಿಂಗ ದೇವಸ್ಥಾನದ ಜಾತ್ರೆ ಹಾಗೂ ಕಾರ್ಣಿಕೋತ್ಸವವು ರವಿವಾರ ದಿ.23ರಂದು ಜರಗುವುದು ಮತ್ತು ಶನಿವಾರ ದಿ. 22 ರಂದು ಮಹಾಭಿಷೇಕ ಬಿಲ್ಲು ಪೂಜೆ, ಹಾಗೂ ರಾತ್ರಿ, ಭಜನೆ ಜಾಗರಣೆ ನಡೆಯುವದು.
ಇದು 59ನೇ ಕಾರ್ಣಿಕೋತ್ಸವ ಆಗಿದ್ದು, ಶ್ರೀ ಮೈಲಾರಲಿಂಗ ದೇವಸ್ಥಾನದ ವಂಶ ಪಾರಂಪರಿಕ ಕಾರ್ಣಿಕ ಪುರುಷ ಶ್ರೀ ಸಿರಿಮಲ್ಲ ತಿಪ್ಪಣ್ಣ ಶಿರೋಳ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರಗುವುದು. ದಿ.23ರಂದು ರವಿವಾರ ಮಧ್ಯಾಹ್ನ 12 ಗಂಟೆಗೆ ಡೋಣಿ ಪೂಜೆ (ತುಂಬಿಸುವುದು), ಅನ್ನ ಸಂತರೆ್ಣ, ಸಂಜೆ 4:30 ಕ್ಕೆ ಮಹಾಮಂಗಳಾರತಿ ನಂತರ ಪಲ್ಲಕ್ಕಿ ಉತ್ಸವ ಕಾರ್ಣಿಕ ಸೇವೆ, ಸರಪಳಿ ಸೇವೆ ಜರಗುವವು, ಕಾರಣ ಸಕಲ ಸದ್ಭಕ್ತರು ತನುಮನದಿಂದ ಸೇವೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಜಾತ್ರೆ ಹಾಗೂ ಅನ್ನ ಪ್ರಸಾದದ ವ್ಯವಸ್ಥಾಪಕರಾದ ಮಂಜುನಾಥ ಎಂ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 